ಹಾಸನ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲೆ ಅಬಕಾರಿ ಸುಂಕವನ್ನು 2ರೂ.ಗೆ ಹೆಚ್ಚಳ ಮಾಡಿರುದರಿಂದ ದೇಶದ ಜನತೆಗೆ ಯಾವುದೇ ರೀತಿ ಹೊರೆಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಹಾಸನದಲ್ಲಿ ಇಂದು(ಏಪ್ರಿಲ್.9) ಜನಾಕ್ರೋಶ ಯಾತ್ರೆಯ ವೇಳೆ ಕೇಂದ್ರ ಸರ್ಕಾರ ವಿರುದ್ಧ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಎಲ್ಪಿಜಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿರುವುದಕ್ಕೆ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯ ಏರಿಕೆ ಮಾಡಿರುವುದು. ಆದರೆ ಈ ಬೆಲೆ ಏರಿಕೆಯಿಂದ ಯಾವುದೇ ರೀತಿ ದೇಶದ ಜನರಿಗೆ ಹೊರೆಯಾಗುವುದಿಲ್ಲವೆಂದು ಕೇಂದ್ರ ಸಚಿವರೇ ಸ್ಪಷ್ಟನೆ ನೀಡಿದ್ದಾರೆ. ಇನ್ನು ಗ್ಯಾಸ್ನ ದರ ಏರಿಕೆಯನ್ನು ಕಳೆದ ವರ್ಷಗಳಿಗೆ ಹೋಲಿಕೆ ಮಾಡಿ ನೋಡಿದರೆ 300 ಕಡಿತಗೊಳಿಸಿ 50 ರೂ.ಏರಿಕೆ ಮಾಡಿದ್ದಾರೆ ಅಷ್ಟೇ ಎಂದು ಹೇಳಿದರು.
ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿರುವುದಕ್ಕೆ ಅಗತ್ಯ ಕಾರಣವಿದೆ. ಆದರೆ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿರುದಕ್ಕೆ ಯಾವ ಕಾರಣವಿದೆ. ಯಾವ ಕಾರಣದಿಂದ ರಾಜ್ಯ ಸರ್ಕಾರ ದರ ಏರಿಕೆ ಮಾಡಿದೆ ಎಂಬುದನ್ನು ರಾಜ್ಯದ ಜನತೆಗೆ ತಿಳಿಸಲಿ ಎಂದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…