ಹಾಸನ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲೆ ಅಬಕಾರಿ ಸುಂಕವನ್ನು 2ರೂ.ಗೆ ಹೆಚ್ಚಳ ಮಾಡಿರುದರಿಂದ ದೇಶದ ಜನತೆಗೆ ಯಾವುದೇ ರೀತಿ ಹೊರೆಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಹಾಸನದಲ್ಲಿ ಇಂದು(ಏಪ್ರಿಲ್.9) ಜನಾಕ್ರೋಶ ಯಾತ್ರೆಯ ವೇಳೆ ಕೇಂದ್ರ ಸರ್ಕಾರ ವಿರುದ್ಧ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಎಲ್ಪಿಜಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿರುವುದಕ್ಕೆ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯ ಏರಿಕೆ ಮಾಡಿರುವುದು. ಆದರೆ ಈ ಬೆಲೆ ಏರಿಕೆಯಿಂದ ಯಾವುದೇ ರೀತಿ ದೇಶದ ಜನರಿಗೆ ಹೊರೆಯಾಗುವುದಿಲ್ಲವೆಂದು ಕೇಂದ್ರ ಸಚಿವರೇ ಸ್ಪಷ್ಟನೆ ನೀಡಿದ್ದಾರೆ. ಇನ್ನು ಗ್ಯಾಸ್ನ ದರ ಏರಿಕೆಯನ್ನು ಕಳೆದ ವರ್ಷಗಳಿಗೆ ಹೋಲಿಕೆ ಮಾಡಿ ನೋಡಿದರೆ 300 ಕಡಿತಗೊಳಿಸಿ 50 ರೂ.ಏರಿಕೆ ಮಾಡಿದ್ದಾರೆ ಅಷ್ಟೇ ಎಂದು ಹೇಳಿದರು.
ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿರುವುದಕ್ಕೆ ಅಗತ್ಯ ಕಾರಣವಿದೆ. ಆದರೆ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿರುದಕ್ಕೆ ಯಾವ ಕಾರಣವಿದೆ. ಯಾವ ಕಾರಣದಿಂದ ರಾಜ್ಯ ಸರ್ಕಾರ ದರ ಏರಿಕೆ ಮಾಡಿದೆ ಎಂಬುದನ್ನು ರಾಜ್ಯದ ಜನತೆಗೆ ತಿಳಿಸಲಿ ಎಂದರು.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…