ಬೆಂಗಳೂರು: ಯಾವಾಗ ಸಿಎಂ ಕುರ್ಚಿ ಖಾಲಿ ಆಗುತ್ತೆ ಎಂದು ಕಾಂಗ್ರೆಸ್ ಶಾಸಕರೇ ಕಾಯುತ್ತಾ ಕುಳಿತಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇನ್ನು 5 ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳುವವರೆಲ್ಲಾ ಸಿಎಂ ಸ್ಥಾನದ ಆಕಾಂಕ್ಷಿಗಳೇ ಆಗಿದ್ದಾರೆ.
ಯಾವಾಗ ಸಿಎಂ ಕುರ್ಚಿ ಖಾಲಿ ಆಗುತ್ತೆ ಎಂದು ಕಾಂಗ್ರೆಸ್ ಸಚಿವರು ಹಾಗೂ ಶಾಸಕರೇ ಕಾಯುತ್ತಾ ಕುಳಿತಿದ್ದಾರೆ ಎಂದು ಲೇವಡಿ ಮಾಡಿದರು.
ಇಷ್ಟೆಲ್ಲಾ ಆದರೂ ಸಿಎಂ ಸಿದ್ದರಾಮಯ್ಯ ಮಾತ್ರ ತನ್ನ ಮೊಂಡುತನವನ್ನು ನಿಲ್ಲಿಸುತ್ತಿಲ್ಲ. ಆದಷ್ಟು ಬೇಗ ಅವರು ಮೊಂಡುತನ ನಿಲ್ಲಿಸಲಿ. ಆಗ ಎಲ್ಲಾ ಸರಿಹೋಗುತ್ತದೆ ಎಂದು ಅಪಹಾಸ್ಯ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈ ಸರ್ಕಾರ ದೇಶದ್ರೋಹಿಗಳ ವಿರುದ್ಧದ ಕೇಸ್ ವಾಪಸ್ ಪಡೆದಿದೆ. ಭಯೋತ್ಪಾದಕರ ಪರ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಆದ್ದರಿಂದ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಮಯ ಹತ್ತಿರ ಆಗುತ್ತಿದೆ ಎಂದು ಭವಿಷ್ಯ ನುಡಿದರು
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…