ರಾಜ್ಯ

ಎಂ.ಬಿ.ಪಾಟೀಲ್‌ರವರು ಮೊದಲು ತಮ್ಮ ಪಕ್ಷದ ಶಾಸಕರನ್ನು ಉಳಿಸಿಕೊಳ್ಳಲಿ: ವಿಜಯೇಂದ್ರ ತಿರುಗೇಟು

ಬೆಂಗಳೂರು: ಸಚಿವ ಎಂ.ಬಿ.ಪಾಟೀಲ್‌ ಅವರು ಮೊದಲು ತಮ್ಮ ಪಕ್ಷದ ಶಾಸಕರನ್ನು ಉಳಿಸಿಕೊಳ್ಳಲಿ. ಬಳಿಕ ಬಿಜೆಪಿ-ಜೆಡಿಎಸ್‌ ಶಾಸಕರ ಸೇರ್ಪಡೆ ಬಗ್ಗೆ ಚಿಂತಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.20) ಎಂ.ಬಿ.ಪಾಟೀಲ್‌ ಅವರ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ಆಡಳಿತ ಪಕ್ಷದಲ್ಲೇ ಅವರ ಶಾಸಕರು ಅನುದಾನವಿಲ್ಲ ಎಂದು ಪರದಾಡುತ್ತಿದ್ದಾರೆ. ಸರ್ಕಾರದಿಂದಲೇ ಕಾಂಗ್ರೆಸ್‌ನ ಶಾಸಕರಿಗೆ ಅನುದಾನ ನೀಡಲು ಆಗುತ್ತಿಲ್ಲ. ಅಲ್ಲದೇ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದಲ್ಲಿ 136 ಶಾಸಕರು ಇದ್ದಾರೆ. ಇನ್ನೂ ಬಿಜೆಪಿ-ಜೆಡಿಎಸ್‌ ಶಾಸಕರನ್ನು ತಮ್ಮ ಪಕ್ಷಕ್ಕೆ ಕರೆದುಕೊಂಡು ಏನು ಮಾಡುತ್ತಾರೆ? ಅವರು ಮೊದಲು ತಮ್ಮ ಪಕ್ಷದ ಶಾಸಕರನ್ನು ಅಲ್ಲಿಯೇ ಉಳಿಸಿಕೊಳ್ಳಲಿ. ಎಂದು ವಾಗ್ದಾಳಿ ನಡೆಸಿದರು.

ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದಲ್ಲಿಯೇ ಸಿಎಂ ಅಧಿಕಾರಕ್ಕಾಗಿ ಜಗ್ಗಾಟ ಹಾಗೂ ಗುದ್ದಾಟ ಪ್ರಾರಂಭವಾಗಿದೆ. ಮೊದಲು ಕಾಂಗ್ರೆಸ್‌ ಸರ್ಕಾರ ಆಯಾಯ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನವನ್ನು ಬಿಡುಗಡೆ ಮಾಡಲಿ. ಹೀಗಾಗಿ ಅವರು ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕು. ಇನ್ನೂ ಸಚಿವ ಎಂ.ಬಿ.ಪಾಟೀಲ್‌ ಮಾತ್ರವಲ್ಲದೇ ಇನ್ಯಾರಾರು ಈ ಆಪರೇಷನ್‌ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಎಚ್ಚರಿಕೆಯಿಂದ ಇರಬೇಕು ಎಂದು ಕಿಡಿಕಾರಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಯುವಜನರ ದಾರಿತಪ್ಪಿಸುವ ಸರ್ಕಾರದ ಕುಟಿಲ ನೀತಿ

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…

2 hours ago

ಓದುಗರ ಪತ್ರ: ಸ್ವಾಗತಾರ್ಹ ನಡೆ!

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…

2 hours ago

ಓದುಗರ ಪತ್ರ: ನಿರ್ಲಕ್ಷ್ಯಕ್ಕೆ ಒಳಗಾದ ಬ್ಯಾರಿಕೇಡ್‌ಗಳು

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…

2 hours ago

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…

2 hours ago

ಕೊಡಗಿನಲ್ಲಿ ಶೇ.80ರಷ್ಟು ಭತ್ತ ಕಟಾವು ಕಾರ್ಯ ಪೂರ್ಣ

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…

2 hours ago

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…

2 hours ago