ರಾಜ್ಯ

ಎಂ.ಬಿ.ಪಾಟೀಲ್‌ರವರು ಮೊದಲು ತಮ್ಮ ಪಕ್ಷದ ಶಾಸಕರನ್ನು ಉಳಿಸಿಕೊಳ್ಳಲಿ: ವಿಜಯೇಂದ್ರ ತಿರುಗೇಟು

ಬೆಂಗಳೂರು: ಸಚಿವ ಎಂ.ಬಿ.ಪಾಟೀಲ್‌ ಅವರು ಮೊದಲು ತಮ್ಮ ಪಕ್ಷದ ಶಾಸಕರನ್ನು ಉಳಿಸಿಕೊಳ್ಳಲಿ. ಬಳಿಕ ಬಿಜೆಪಿ-ಜೆಡಿಎಸ್‌ ಶಾಸಕರ ಸೇರ್ಪಡೆ ಬಗ್ಗೆ ಚಿಂತಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.20) ಎಂ.ಬಿ.ಪಾಟೀಲ್‌ ಅವರ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ಆಡಳಿತ ಪಕ್ಷದಲ್ಲೇ ಅವರ ಶಾಸಕರು ಅನುದಾನವಿಲ್ಲ ಎಂದು ಪರದಾಡುತ್ತಿದ್ದಾರೆ. ಸರ್ಕಾರದಿಂದಲೇ ಕಾಂಗ್ರೆಸ್‌ನ ಶಾಸಕರಿಗೆ ಅನುದಾನ ನೀಡಲು ಆಗುತ್ತಿಲ್ಲ. ಅಲ್ಲದೇ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದಲ್ಲಿ 136 ಶಾಸಕರು ಇದ್ದಾರೆ. ಇನ್ನೂ ಬಿಜೆಪಿ-ಜೆಡಿಎಸ್‌ ಶಾಸಕರನ್ನು ತಮ್ಮ ಪಕ್ಷಕ್ಕೆ ಕರೆದುಕೊಂಡು ಏನು ಮಾಡುತ್ತಾರೆ? ಅವರು ಮೊದಲು ತಮ್ಮ ಪಕ್ಷದ ಶಾಸಕರನ್ನು ಅಲ್ಲಿಯೇ ಉಳಿಸಿಕೊಳ್ಳಲಿ. ಎಂದು ವಾಗ್ದಾಳಿ ನಡೆಸಿದರು.

ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದಲ್ಲಿಯೇ ಸಿಎಂ ಅಧಿಕಾರಕ್ಕಾಗಿ ಜಗ್ಗಾಟ ಹಾಗೂ ಗುದ್ದಾಟ ಪ್ರಾರಂಭವಾಗಿದೆ. ಮೊದಲು ಕಾಂಗ್ರೆಸ್‌ ಸರ್ಕಾರ ಆಯಾಯ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನವನ್ನು ಬಿಡುಗಡೆ ಮಾಡಲಿ. ಹೀಗಾಗಿ ಅವರು ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕು. ಇನ್ನೂ ಸಚಿವ ಎಂ.ಬಿ.ಪಾಟೀಲ್‌ ಮಾತ್ರವಲ್ಲದೇ ಇನ್ಯಾರಾರು ಈ ಆಪರೇಷನ್‌ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಎಚ್ಚರಿಕೆಯಿಂದ ಇರಬೇಕು ಎಂದು ಕಿಡಿಕಾರಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

17 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

17 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

17 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

17 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

17 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

17 hours ago