by vijayendra
ಬೆಂಗಳೂರು: ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿರೋದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಬ್ಯಾಲೆಟ್ ಪೇಪರ್ ನೆನಪಾಗಿದೆ. ಇವಿಎಂ ಮೇಲೆ ವಿಶ್ವಾಸ ಕಡಿಮೆಯಾಗಿದೆ. ಯಾಕೆ ಎಂದು ಸಿಎಂ, ಡಿಸಿಎಂ ಹೇಳಬೇಕು. ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್ ಸೋತಿದೆ. ಜನ ಅವರನ್ನು ತಿರಸ್ಕರಿಸಿದ್ದಾರೆ. ಇದನ್ನು ಮುಚ್ಚಿಕೊಳ್ಳಲು ಇವಿಎಂ ಸರಿ ಇಲ್ಲ ಎನ್ನುತ್ತಿದ್ದಾರೆ. ನಾವು ಬ್ಯಾಲೆಟ್ ಪೇಪರ್ಗೆ ಹೆದರುತ್ತಿಲ್ಲ. ಅದರ ಅವಶ್ಯಕತೆ ಇಲ್ಲ ಎಂದರು.
ಇದನ್ನೂ ಓದಿ: ನಂಜನಗೂಡು: ಒತ್ತುವರಿಗಾಗಿ ಸ್ಮಶಾನಕ್ಕೆ ನಾಲೆ ಮಣ್ಣು
ಇನ್ನು ಇವಿಎಂಗಳಲ್ಲಿ ದೋಷ ಇದ್ದಿದ್ದರೆ ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕಗಳಲ್ಲಿ ಕಾಂಗ್ರೆಸ್ ಹೇಗೆ ಅಧಿಕಾರಕ್ಕೆ ಬಂತು? ಮಹಾರಾಷ್ಟ್ರ, ಹರಿಯಾಣಗಳಲ್ಲಿ ಸೋತಿರುವ ಕಾಂಗ್ರೆಸ್ ಹತಾಶೆಯಿಂದ ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿದ್ದಾರೆ. ಕಾಂಗ್ರೆಸ್ ಎಲ್ಲವನ್ನೂ ವಿರೋಧ ಮಾಡುತ್ತಿದೆ. ಬ್ಯಾಲೆಟ್ ಪೇಪರ್ ವಿರುದ್ಧ ಬಿಜೆಪಿಯಿಂದ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದು ತಿಳಿಸಿದರು.
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…
ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…
ಬಹುನಿರೀಕ್ಷಿತ ಧುರಂಧರ್-2 ಸಿನಿಮಾ ಬಗ್ಗೆ ನಟಿ ರಮ್ಯಾ ಬರೆದಿರುವ ಟೂ ಪೇಜ್ ವಿಮರ್ಶೆ ಈಗ ಸೋಚಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ.…
ಎಚ್.ಡಿ.ಕೋಟೆ: ಕಬಿನಿ ಕಾಡಿನಲ್ಲಿ ಹುಲಿ ಮರಿಗಳು ಮಣ್ಣಿನ ವಾಸನೆ ಸವಿದು ಮೈಮರೆತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.…
ಮಂಡ್ಯ: ತಾಲ್ಲೂಕಿನ ಭೂತನಹೊಸೂರು ಗ್ರಾಮದ ಸಮೀಪದ ಕಬ್ಬಿನ ಗದ್ದಯೊಂದರಲ್ಲಿ ಪತ್ತೆಯಾಗಿದ್ದ ಮೂರು ಚಿರತೆ ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಬೋನಿನಲ್ಲಿ…
ಕೆ.ಆರ್.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್ಮಿಲ್ನಲ್ಲಿ ಪತ್ತೆಯಾಗಿದೆ. ಮಾರ್ಚ್.17ರಂದು ರೈತ…