by vijayendra
ಬೆಂಗಳೂರು: ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿರೋದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಬ್ಯಾಲೆಟ್ ಪೇಪರ್ ನೆನಪಾಗಿದೆ. ಇವಿಎಂ ಮೇಲೆ ವಿಶ್ವಾಸ ಕಡಿಮೆಯಾಗಿದೆ. ಯಾಕೆ ಎಂದು ಸಿಎಂ, ಡಿಸಿಎಂ ಹೇಳಬೇಕು. ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್ ಸೋತಿದೆ. ಜನ ಅವರನ್ನು ತಿರಸ್ಕರಿಸಿದ್ದಾರೆ. ಇದನ್ನು ಮುಚ್ಚಿಕೊಳ್ಳಲು ಇವಿಎಂ ಸರಿ ಇಲ್ಲ ಎನ್ನುತ್ತಿದ್ದಾರೆ. ನಾವು ಬ್ಯಾಲೆಟ್ ಪೇಪರ್ಗೆ ಹೆದರುತ್ತಿಲ್ಲ. ಅದರ ಅವಶ್ಯಕತೆ ಇಲ್ಲ ಎಂದರು.
ಇದನ್ನೂ ಓದಿ: ನಂಜನಗೂಡು: ಒತ್ತುವರಿಗಾಗಿ ಸ್ಮಶಾನಕ್ಕೆ ನಾಲೆ ಮಣ್ಣು
ಇನ್ನು ಇವಿಎಂಗಳಲ್ಲಿ ದೋಷ ಇದ್ದಿದ್ದರೆ ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕಗಳಲ್ಲಿ ಕಾಂಗ್ರೆಸ್ ಹೇಗೆ ಅಧಿಕಾರಕ್ಕೆ ಬಂತು? ಮಹಾರಾಷ್ಟ್ರ, ಹರಿಯಾಣಗಳಲ್ಲಿ ಸೋತಿರುವ ಕಾಂಗ್ರೆಸ್ ಹತಾಶೆಯಿಂದ ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿದ್ದಾರೆ. ಕಾಂಗ್ರೆಸ್ ಎಲ್ಲವನ್ನೂ ವಿರೋಧ ಮಾಡುತ್ತಿದೆ. ಬ್ಯಾಲೆಟ್ ಪೇಪರ್ ವಿರುದ್ಧ ಬಿಜೆಪಿಯಿಂದ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದು ತಿಳಿಸಿದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…