ರಾಜ್ಯ

ಬ್ಯಾಲೆಟ್‌ ಪೇಪರ್‌ ಜಾರಿಗೆ ಬಿ.ವೈ.ವಿಜಯೇಂದ್ರ ತೀವ್ರ ವಿರೋಧ

ಬೆಂಗಳೂರು: ಬ್ಯಾಲೆಟ್‌ ಪೇಪರ್‌ ಜಾರಿಗೆ ತರುತ್ತಿರೋದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಬ್ಯಾಲೆಟ್‌ ಪೇಪರ್‌ ನೆನಪಾಗಿದೆ. ಇವಿಎಂ ಮೇಲೆ ವಿಶ್ವಾಸ ಕಡಿಮೆಯಾಗಿದೆ. ಯಾಕೆ ಎಂದು ಸಿಎಂ, ಡಿಸಿಎಂ ಹೇಳಬೇಕು. ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್‌ ಸೋತಿದೆ. ಜನ ಅವರನ್ನು ತಿರಸ್ಕರಿಸಿದ್ದಾರೆ. ಇದನ್ನು ಮುಚ್ಚಿಕೊಳ್ಳಲು ಇವಿಎಂ ಸರಿ ಇಲ್ಲ ಎನ್ನುತ್ತಿದ್ದಾರೆ. ನಾವು ಬ್ಯಾಲೆಟ್‌ ಪೇಪರ್‌ಗೆ ಹೆದರುತ್ತಿಲ್ಲ. ಅದರ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ: ನಂಜನಗೂಡು: ಒತ್ತುವರಿಗಾಗಿ ಸ್ಮಶಾನಕ್ಕೆ ನಾಲೆ ಮಣ್ಣು

ಇನ್ನು ಇವಿಎಂಗಳಲ್ಲಿ ದೋಷ ಇದ್ದಿದ್ದರೆ ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕಗಳಲ್ಲಿ ಕಾಂಗ್ರೆಸ್‌ ಹೇಗೆ ಅಧಿಕಾರಕ್ಕೆ ಬಂತು? ಮಹಾರಾಷ್ಟ್ರ, ಹರಿಯಾಣಗಳಲ್ಲಿ ಸೋತಿರುವ ಕಾಂಗ್ರೆಸ್‌ ಹತಾಶೆಯಿಂದ ಬ್ಯಾಲೆಟ್‌ ಪೇಪರ್‌ ಜಾರಿಗೆ ತರುತ್ತಿದ್ದಾರೆ. ಕಾಂಗ್ರೆಸ್‌ ಎಲ್ಲವನ್ನೂ ವಿರೋಧ ಮಾಡುತ್ತಿದೆ. ಬ್ಯಾಲೆಟ್‌ ಪೇಪರ್‌ ವಿರುದ್ಧ ಬಿಜೆಪಿಯಿಂದ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

7 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

7 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

8 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

8 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago