ರಾಜ್ಯ

ಮುಡಾದಲ್ಲಿ 700 ಕೋಟಿ ರೂ. ಅಧಿಕ ಹಗರಣ ನಡೆಡಿದೆ: ಬಿ.ವೈ.ವಿಜಯೇಂದ್ರ

ಕಲಬುರುಗಿ: ಮುಡಾ ಪ್ರಕರಣದಲ್ಲಿ ಇಡಿ ತನಿಖೆ ನಡೆಸಿದ್ದು, ಈ ತನಿಖಾ ಸಂಸ್ಥೆಯಿಂದ ಲೋಕಾಯುಕ್ತಕ್ಕೆ ಬರೆದ ಪತ್ರದಲ್ಲಿ ಸುಮಾರು 700 ಕೋಟಿ ರೂಪಾಯಿಗೂ ಅಧಿಕ ಹಗರಣ ನಡೆದಿದೆ ಎಂಬ ವಿಚಾರವನ್ನು ಇಡಿಯೇ ತಿಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ಇಂದು(ಡಿ.4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮುಡಾದ 50:50 ಅನುಪಾತದ ಬದಲಿ 14 ನಿವೇಶನಗಳು ಅಕ್ರಮವಾಗಿ ಬಂದಿವೆ ಎಂಬ ಆರೋಪದಿಂದ ಹಿಂದೆ ಸರಿಯಲು ಆ ನಿವೇಶನಗಳನ್ನು ಪಾರ್ವತಿ ಸಿದ್ದರಾಮಯ್ಯ ಅವರು ಮುಡಾಗೆ ವಾಪಾಸ್‌ ಮಾಡಿದ್ದಾರೆ. ಆದರೆ ಇಡಿ ತನಿಖೆಯಲ್ಲಿ ಮುಡಾದಲ್ಲಿ 700 ಕೋಟಿ ರೂಪಾಯಿಗೂ ಅಧಿಕ ಹಗರಣ ನಡೆದಿದೆ ಎಂದು ತಿಳಿಸಿದೆ. ಹೀಗಾಗಿ ಬಡವರ ನಿವೇಶನಗಳು ಬ್ರೋಕರ್‌ ಪಾಲಾಗಿವೆ ಎಂದು ಹೇಳಿದ್ದಾರೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಮುಡಾದಲ್ಲಿ ಹಗರಣ ನಡೆದಿಲ್ಲ ಎಂದು ಹೇಳಿದ್ದರು. ಆದರೆ ನಮ್ಮ ಪಕ್ಷದಿಂದ 14 ನಿವೇಶನಗಳಿಗೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ಹೋರಾಟ ನಡೆಸಿದ್ದೇವೆ. ಆದರೆ ಇದೀಗ ಮುಡಾ ಪ್ರಕರಣದಲ್ಲಿ ಇಡಿ ತನಿಖೆ ಶುರು ಮಾಡಿ ವಿಚಾರಣೆ ನಡೆಸಿದಾಗ 700 ಕೋಟಿ ರೂಪಾಯಿಗೂ ಹೆಚ್ಚು ಅವ್ಯವಹಾರ ನಡೆದಿದೆ ಎಂದು ವರದಿ ಮಾಡಿದೆ. ಹೀಗಾಗಿ ಬಡವರ ನಿವೇಶಗಳು ಬ್ರೋಕರ್‌ಗಳ ಮೂಲಕ ರಿಯಲ್‌ ಎಸ್ಟೇಟ್‌ ಹಾಗೂ ಶ್ರೀಮಂತರ ಪಾಲಾಗಿವೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

5 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

8 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

10 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

10 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

11 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

11 hours ago