ರಾಜ್ಯ

ಪಕ್ಷಕ್ಕೆ ದುಡಿದ ಯಡಿಯೂರಪ್ಪನವರನ್ನು ನಿಂದಿಸಿದರೆ ಸಹಿಸಲು ಸಾಧ್ಯವಿಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಪಕ್ಷಕ್ಕೆ ದುಡಿದ್ದಾರೆ. ಅಂತಹವರನ್ನು ಅತ್ಯಂತ ಕೀಳುಮಟ್ಟದಲ್ಲಿ ನಿಂದಿಸಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.6) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ತಟಸ್ಥ ಎಂದು ಹೇಳಿಕೊಳ್ಳುವ ನಾಯಕರು ಮೊದಲಿಗೆ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ತೇಜೋವಧೆ ಮಾಡುತ್ತಿರುವವರ ಬಾಯಿ ಮುಚ್ಚಿಸಲಿ. ಯಡಿಯೂರಪ್ಪ ಅವರು ಪಕ್ಷಕ್ಕೆ ಏನು ಕೊಡುಗೆ ನೀಡಿಲ್ಲವೇ ಎಂದು ಪ್ರಶ್ನಿಸಿದರು.

ನಾನು ಯಾವುದೇ ಅಪಮಾನ ಸಹಿಸಿಕೊಳ್ಳಲು ತಯಾರಿದ್ದೇನೆ. ಆದರೆ ಬಿಜೆಪಿ ಪಕ್ಷಕ್ಕೆ ದುಡಿದ ಯಡಿಯೂರಪ್ಪ ಅವರನ್ನು ಅತ್ಯಂತ ಕೀಳು ಮಟ್ಟದಲ್ಲಿ ನಿಂದಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಇನ್ನೂ ತಟಸ್ಥವೆಂದು ಹೇಳಿಕೊಳ್ಳುವವರು ಮತ್ತು ಪಕ್ಷದ ಬೆಳವಣಿಗೆ ಬೇಸರ ತಂದಿದೆ ಎಂದು ಹೇಳುವವರು ಯಾಕೆ ಸುಮ್ಮನಿದ್ದಾರೆ? ಮಧ್ಯಸ್ಥಿಕೆ ಯಾಕೆ ವಹಿಸುತ್ತಿಲ್ಲ? ತಟಸ್ಥ ಬಣ ವಿಚಾರದ ಬಗ್ಗೆಯೂ ತಿಳಿದಿದೆ ಎಂದರು.

ನಾನು ಪಕ್ಷದ ಕಾರ್ಯಕರ್ತನಾಗಿ ವಿವಿಧ ಹುದ್ದೆಗಳಲ್ಲಿ 18 ವರ್ಷಕ್ಕೂ ಅಧಿಕ ಕಾಲ ಕಾರ್ಯ ನಿರ್ವಹಿಸಿದ್ದೇನೆ. ನಾನೇನು ಹೊಸಬನಲ್ಲ, ಲಕ್ಷಾಂತರ ಕಾರ್ಯಕರ್ತರಿಗೆ ನಾನು ಏನೆಂಬು ಗೊತ್ತಿದೆ. ಅಲ್ಲದೇ ಪಕ್ಷದಲ್ಲಿ ಇವೆಲ್ಲನ್ನೂ ಸರಿಪಡಿಸಲು ಪಕ್ಷದ ರಾಷ್ಟ್ರೀಯ ನಾಯಕರೇ ಬರಬೇಕಾ? ತಟಸ್ಥ ನಾಯಕರಿಗೂ ಜವಾಬ್ದಾರಿ ಇಲ್ಲವಾ? ಇನ್ನೂ ಅಡ್ರೆಸ್‌ಗೆ ಇಲ್ಲದವರೂ ಯಡಿಯೂರಪ್ಪರವರಿಂದಲೇ ಮೇಲೆ ಬಂದಿದ್ದಾರೆ ಎಂದು ಹೇಳಿದರು.

ಇನ್ನೂ ಶ್ರೀರಾಮುಲು ಅವರ ಹೇಳಿಕೆಯಿಂದ ನನಗೆ ಬೇಸರವಿಲ್ಲ. ನನಗೆ ಅವರಷ್ಟು ಅನುಭವವಿಲ್ಲದಿರಬಹುದು, ಆದರೆ  ನನಗೆ ಕಾರ್ಯಕರ್ತನಾಗಿ ಅನುಭವವಿದೆ ಎಂದು ತಿರುಗೇಟು ನೀಡಿದರು.

ಅರ್ಚನ ಎಸ್‌ ಎಸ್

Recent Posts

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

35 mins ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

1 hour ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

1 hour ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

1 hour ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

1 hour ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

2 hours ago