ರಾಜ್ಯ

ಪಕ್ಷಕ್ಕೆ ದುಡಿದ ಯಡಿಯೂರಪ್ಪನವರನ್ನು ನಿಂದಿಸಿದರೆ ಸಹಿಸಲು ಸಾಧ್ಯವಿಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಪಕ್ಷಕ್ಕೆ ದುಡಿದ್ದಾರೆ. ಅಂತಹವರನ್ನು ಅತ್ಯಂತ ಕೀಳುಮಟ್ಟದಲ್ಲಿ ನಿಂದಿಸಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.6) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ತಟಸ್ಥ ಎಂದು ಹೇಳಿಕೊಳ್ಳುವ ನಾಯಕರು ಮೊದಲಿಗೆ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ತೇಜೋವಧೆ ಮಾಡುತ್ತಿರುವವರ ಬಾಯಿ ಮುಚ್ಚಿಸಲಿ. ಯಡಿಯೂರಪ್ಪ ಅವರು ಪಕ್ಷಕ್ಕೆ ಏನು ಕೊಡುಗೆ ನೀಡಿಲ್ಲವೇ ಎಂದು ಪ್ರಶ್ನಿಸಿದರು.

ನಾನು ಯಾವುದೇ ಅಪಮಾನ ಸಹಿಸಿಕೊಳ್ಳಲು ತಯಾರಿದ್ದೇನೆ. ಆದರೆ ಬಿಜೆಪಿ ಪಕ್ಷಕ್ಕೆ ದುಡಿದ ಯಡಿಯೂರಪ್ಪ ಅವರನ್ನು ಅತ್ಯಂತ ಕೀಳು ಮಟ್ಟದಲ್ಲಿ ನಿಂದಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಇನ್ನೂ ತಟಸ್ಥವೆಂದು ಹೇಳಿಕೊಳ್ಳುವವರು ಮತ್ತು ಪಕ್ಷದ ಬೆಳವಣಿಗೆ ಬೇಸರ ತಂದಿದೆ ಎಂದು ಹೇಳುವವರು ಯಾಕೆ ಸುಮ್ಮನಿದ್ದಾರೆ? ಮಧ್ಯಸ್ಥಿಕೆ ಯಾಕೆ ವಹಿಸುತ್ತಿಲ್ಲ? ತಟಸ್ಥ ಬಣ ವಿಚಾರದ ಬಗ್ಗೆಯೂ ತಿಳಿದಿದೆ ಎಂದರು.

ನಾನು ಪಕ್ಷದ ಕಾರ್ಯಕರ್ತನಾಗಿ ವಿವಿಧ ಹುದ್ದೆಗಳಲ್ಲಿ 18 ವರ್ಷಕ್ಕೂ ಅಧಿಕ ಕಾಲ ಕಾರ್ಯ ನಿರ್ವಹಿಸಿದ್ದೇನೆ. ನಾನೇನು ಹೊಸಬನಲ್ಲ, ಲಕ್ಷಾಂತರ ಕಾರ್ಯಕರ್ತರಿಗೆ ನಾನು ಏನೆಂಬು ಗೊತ್ತಿದೆ. ಅಲ್ಲದೇ ಪಕ್ಷದಲ್ಲಿ ಇವೆಲ್ಲನ್ನೂ ಸರಿಪಡಿಸಲು ಪಕ್ಷದ ರಾಷ್ಟ್ರೀಯ ನಾಯಕರೇ ಬರಬೇಕಾ? ತಟಸ್ಥ ನಾಯಕರಿಗೂ ಜವಾಬ್ದಾರಿ ಇಲ್ಲವಾ? ಇನ್ನೂ ಅಡ್ರೆಸ್‌ಗೆ ಇಲ್ಲದವರೂ ಯಡಿಯೂರಪ್ಪರವರಿಂದಲೇ ಮೇಲೆ ಬಂದಿದ್ದಾರೆ ಎಂದು ಹೇಳಿದರು.

ಇನ್ನೂ ಶ್ರೀರಾಮುಲು ಅವರ ಹೇಳಿಕೆಯಿಂದ ನನಗೆ ಬೇಸರವಿಲ್ಲ. ನನಗೆ ಅವರಷ್ಟು ಅನುಭವವಿಲ್ಲದಿರಬಹುದು, ಆದರೆ  ನನಗೆ ಕಾರ್ಯಕರ್ತನಾಗಿ ಅನುಭವವಿದೆ ಎಂದು ತಿರುಗೇಟು ನೀಡಿದರು.

ಅರ್ಚನ ಎಸ್‌ ಎಸ್

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

30 mins ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

43 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

45 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

47 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

49 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

53 mins ago