ರಾಜ್ಯ

ರಮೇಶ್‌ ಜಾರಕಿಹೊಳಿ ಬಹಿರಂಗವಾಗಿ ಹೇಳಿಕೆ ನೀಡುವುದು ಸರಿಯಲ್ಲ: ಬಿ.ವೈ.ವಿಜಯೇಂದ್ರ

ಕೊಪ್ಪಳ: ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬಿ.ಎಸ್‌.ಯಡಿಯೂರಪ್ಪ ಅವರು ಹಳ್ಳಿಗಳಲ್ಲಿ ಸುತ್ತಾಡಿ ಪಕ್ಷವನ್ನು ಕಟ್ಟಿದ್ದಾರೆ. ಆದರೆ ಇತ್ತೀಚೆಗೆಷ್ಟೇ ಬಿಜೆಪಿಗೆ ಬಂದಿರುವ ರಮೇಶ್‌ ಜಾರಕಿಹೊಳಿ ಅವರು, ಅವರ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಜನವರಿ.15) ರಮೇಶ್‌ ಜಾರಕಿಹೊಳಿ ಅವರ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಬಗ್ಗೆ ರಮೇಶ್‌ ಜಾರಕಿಹೊಳಿರವರು ಹೇಳಿಕೆ ನೀಡುವಾಗ ಎಚ್ಚರಿಕೆಯಿಂದ ಹೇಳಿಕೆಗಳನ್ನು ನೀಡಬೇಕು. ಪಕ್ಷದಲ್ಲಿ ಅವರಿಗೆ ಸಮಸ್ಯೆಯಿದ್ದರೆ ಹೈಕಮಾಂಡ್‌ನೊಂದಿಗೆ ಚರ್ಚಿಸಿಕೊಳ್ಳಲಿ. ಅದನ್ನು ಬಿಟ್ಟು ಬಾಯಿಯನ್ನು ಹಿಡಿತದಲ್ಲಿಟ್ಟುಕೊಳ್ಳದೇ ಬಹಿರಂಗವಾಗಿ ಹೇಳಿಕೆಗಳನ್ನು ಸರಿಯಲ್ಲ ಎಂದು ಹೇಳಿದರು.

ಯಡಿಯೂರಪ್ಪ ಅವರ ಬಗ್ಗೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿರುವುದರಿಂದ ಅವರ ಲಕ್ಷಾಂತರ ಅಭಿಮಾನಿಗಳಿಗೆ ನೋವಾಗುತ್ತದೆ. ಪಕ್ಷದಲ್ಲಿ ಕಾರ್ಯಕರ್ತರು ಅಸಮಾಧಾನವಾದರೇ ರಮೇಶ್‌ ಓಡಾಡುವುದೇ ಕಷ್ಟವಾಗುತ್ತದೆ. ಇನ್ನೂ ಕೆಲವೇ ದಿನಗಳಲ್ಲಿ ಪಕ್ಷದಲ್ಲಿ ಎಲ್ಲವೂ ಸರಿಯಾಗುತ್ತದೆ. ಅವರ ಬಗ್ಗೆ ಯಾಕೆ ತಲೆ ಕೆಡಿಸಿಕೊಳ್ಳುತ್ತೀರಿ ಎಂದರು.

ಬಿಜೆಪಿ ಪಕ್ಷಕ್ಕೆ ನಾನು ರಾಜ್ಯ ಅಧ್ಯಕ್ಷನಾದ ನಂತರ ನಿರಂತರ ಹೋರಾಟ ಮಾಡುತ್ತಿದ್ದೇನೆ. ಆದರೆ ಅಲ್ಲೊಬ್ಬರು, ಇಲ್ಲೊಬ್ಬರು ಮನಬಂದಂತೆ ಹೇಳಿದರೆ ಅದಕ್ಕೆಲ್ಲಾ ಉತ್ತರ ನೀಡಲು ನನ್ನ ಬಳಿ ಅಷ್ಟು ಸಮಯವಿಲ್ಲ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago