ರಾಜ್ಯ

ಮುಡಾ ಹಗರಣ| ಇ.ಡಿ.ಯಿಂದ ಕೋಟ್ಯಾಂತರ ಆಸ್ತಿ ಜಪ್ತಿ, ಸಿಎಂ ಸಿದ್ದರಾಮಯ್ಯ ಈಗಾದರೂ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ, ಕೋಟ್ಯಾಂತರ ರೂ. ಆಸ್ತಿಯನ್ನು ಜಪ್ತಿ ಮಾಡಲಾಗುತ್ತದೆಂದು ವರದಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರು ಎಚ್ಚೆತ್ತುಕೊಂಡು ಈಗಲಾದರೂ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.18) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕಿತ್ತು. ಅವರ ಭಂಡತನದಿಂದ ರಾಜೀನಾಮೆ ನೀಡದೆ ಅಧಿಕಾರದಲ್ಲಿ ಮುಂದುವರೆಯುತ್ತಿದ್ದಾರೆ. ಆದರೆ ಇದೀಗ ಇ.ಡಿ.ಅಧಿಕಾರಿಗಳು ತನಿಖೆ ನಡೆಸಿದ್ದು, ಮುಡಾದಲ್ಲಿ ಕೋಟ್ಯಾಂತರ ರೂಪಾಯಿಗಳಷ್ಟು ಹಗರಣ ನಡೆದಿದೆ ಎಂದು ವರದಿ ಮಾಡಿದೆ. ಹೀಗಾಗಿ ಸಿದ್ದರಾಮಯ್ಯನವರು ಎಚ್ಚೆತ್ತುಕೊಂಡು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಜಾತಿಗಣತಿಯ ಬಗ್ಗೆ ಮಾತನಾಡಿದ ಅವರು, 10 ವರ್ಷಗಳ ಹಿಂದೆಯೇ ಜಾತಿಗಣತಿ ಅವರ ಕೈ ಸೇರಿತ್ತು. ಅಂದೇ ಯಾಕೆ ಜಾತಿಗಣತಿಯನ್ನು ಜಾರಿಗೆ ತರಲಿಲ್ಲ? ಇದೀಗ ಹತ್ತು ವರ್ಷಗಳ ನಂತರ ಜಾತಿಗಣತಿಯನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಆದರೆ ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜಕೀಯ ಚದುರಂಗದ ಆಟವಾಡಿ, ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

11 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

11 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

13 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

13 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

13 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

21 hours ago