ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ನಿನ್ನೆ ಬೆದರಿಕೆ ಪತ್ರ ಬಂದಿದ್ದು, ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ(ಜನವರಿ.10) ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದಿದ್ದಾರೆ.
ಸಿ.ಟಿ. ರವಿ ಅವರನ್ನು ಗುರಿಯನ್ನಾಗಿಸಿಕೊಂಡಿರುವ ದುಷ್ಕರ್ಮಿಗಳು ಅವರ ವಿರುದ್ಧ ವ್ಯೂಹ ರಚಿಸಿರುವ ಸಾಧ್ಯತೆಯನ್ನು ಅವರಿಗೆ ಬಂದಿರುವ ಬೆದರಿಕೆಯ ಸಂದೇಶಗಳ ಹಿನ್ನೆಲೆಯಲ್ಲಿ ತಳ್ಳಿ ಹಾಕಲಾಗದು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅವರಿಗೆ ರಕ್ಷಣೆ ಸಿಗುತ್ತದೆ ಎಂದು ನಿರೀಕ್ಷಿಸುವುದು “ಮಾರ್ಜಾಲ ನ್ಯಾಯದಂತಾಗುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.
ಸಿ.ಟಿ. ರವಿ ಅವರಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ. ಇಷ್ಟಾಗಿಯೂ ದುಷ್ಟ ಶಕ್ತಿಗಳ ಮೇಲೆ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ಏಕೆಂದರೆ ಅವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂಬುದು ಬಹಿರಂಗ ಸತ್ಯವಾಗಿದೆ. ಈ ನಿಟ್ಟಿನಲ್ಲಿ ಸಿ.ಟಿ. ರವಿ ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಲು ಒತ್ತಾಯಿಸಿದ್ದಾರೆ.
ಶಾಸಕ ಸಿ.ಟಿ. ರವಿ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಇಂತಹ ಬೆದರಿಕೆ, ದೌರ್ಜನ್ಯಗಳು ಮುಂದುವರೆದಲ್ಲಿ ಬಿಜೆಪಿ ಅದನ್ನು ಸವಾಲಾಗಿ ಸ್ವೀಕರಿಸಿ ಹೋರಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…
ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…