ರಾಜ್ಯ

ಕೇಂದ್ರ ಬಜೆಟ್‌ ಆತ್ಮವಿಶ್ವಾಸ ತುಂಬುವ ಭರವಸೆಯಾಗಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದು  2025-26ನೇ ಬಜೆಟ್‌ ಅನ್ನು ಮಂಡನೆ ಮಾಡಿದ್ದು, ಈ ಬಜೆಟ್‌ ಆತ್ಮವಿಶ್ವಾಸ ತುಂಬುವ ಭರವಸೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ಈ ವರೆಗೂ ನಡೆದು ಬಂದ ಹಾದಿ ಬಡತನ ನಿರ್ಮೂಲನೆಗಾಗಿ
ಸುಧಾರಣೆ ಹಾಗೂ ಅಭಿವೃದ್ದಿಯ ಆರ್ಥಿಕ ಹೆಜ್ಜೆ ಗುರುತುಗಳಾಗಿವೆ. ಮುಂದಿನ ಹೆಗ್ಗುರಿ ಸದೃಢ ಭಾರತ ಕಟ್ಟುವ ಮಹಾಸಂಕಲ್ಪ, 2047ರ ವೇಳೆಗೆ ವಿಶ್ವ ಮುಂಚೂಣಿಯಲ್ಲಿ ಅಗ್ರ ಸ್ಥಾನದಲ್ಲಿ ನಿಲ್ಲುವ ಭಾರತ ನಿರ್ಮಾಣದ ಯೋಜನೆ ರೂಪಿಸಲು ಇಂದು ಸಂಸತ್ತಿನಲ್ಲಿ ಮಂಡನೆಯಾಗಿರುವ ಬಜೆಟ್ ಆತ್ಮವಿಶ್ವಾಸ ತುಂಬುವ ಭರವಸೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ದೇಶದ ಕೃಷಿ, ಸಾರಿಗೆ, ಕೈಗಾರಿಕೆ, ಉದ್ಯೋಗ, ಪ್ರವಾಸೋದ್ಯಮ, ವೈದ್ಯಕೀಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವ ನೀಡುವ ಮೂಲಕ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ಮಹತ್ವಾಕಾಂಕ್ಷೆಯ ಬಜೆಟ್ ಮಂಡಿಸುವುದರೊಂದಿಗೆ ಸತತ 8 ಬಾರಿ ಬಜೆಟ್ ಮಂಡಿಸಿದ ಆರ್ಥಿಕ ತಜ್ಞತೆಯ ದಿಟ್ಟ ಮಹಿಳೆಯಾಗಿ ರಾಷ್ಟ್ರ ರಾಜಕಾರಣದಲ್ಲಿ ದಾಖಲೆ ಬರೆದಿರುವ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿಜೀ ಅವರ ಸರ್ಕಾರವು ದೇಶದ ಆರ್ಥಿಕತೆ ಸುಭದ್ರವಾಗಿಸಿ, ವಿಕಸಿತ ಭಾರತದ ನಿರ್ಮಾಣದ ಸಂಕಲ್ಪ ಈಡೇರಿಸುವ ಅತ್ಯುತ್ತಮ ಬಜೆಟ್ ಮಂಡಿಸಿದೆ. ಜನಸಾಮಾನ್ಯರಿಗೆ ಭರವಸೆ ಮೂಡಿಸುವ ಮೂಲಕ ಮಹತ್ವದ ಹೆಜ್ಜೆಯಿಟ್ಟಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…

28 mins ago

ರಸ್ತೆ ಮಧ್ಯೆ ಪುಂಡರ ವ್ಹೀಲಿಂಗ್:‌ ವಿಡಿಯೋ ವೈರಲ್‌

ಹಾಸನ: ಪುಂಡರಿಬ್ಬರು ವ್ಹೀಲಿಂಗ್‌ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…

32 mins ago

ಚಾರ್ಮಾಡಿ ಘಾಟ್‌ ಅರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…

45 mins ago

ವಿರಾಜಪೇಟೆ| ಮಣ್ಣು ಕುಸಿದು ಟಿಪ್ಪರ್ ಚಾಲಕ ಸಾವು

ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…

1 hour ago

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…

2 hours ago

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…

3 hours ago