ರಾಜ್ಯ

ಕೇಂದ್ರ ಬಜೆಟ್‌ ಆತ್ಮವಿಶ್ವಾಸ ತುಂಬುವ ಭರವಸೆಯಾಗಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದು  2025-26ನೇ ಬಜೆಟ್‌ ಅನ್ನು ಮಂಡನೆ ಮಾಡಿದ್ದು, ಈ ಬಜೆಟ್‌ ಆತ್ಮವಿಶ್ವಾಸ ತುಂಬುವ ಭರವಸೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ಈ ವರೆಗೂ ನಡೆದು ಬಂದ ಹಾದಿ ಬಡತನ ನಿರ್ಮೂಲನೆಗಾಗಿ
ಸುಧಾರಣೆ ಹಾಗೂ ಅಭಿವೃದ್ದಿಯ ಆರ್ಥಿಕ ಹೆಜ್ಜೆ ಗುರುತುಗಳಾಗಿವೆ. ಮುಂದಿನ ಹೆಗ್ಗುರಿ ಸದೃಢ ಭಾರತ ಕಟ್ಟುವ ಮಹಾಸಂಕಲ್ಪ, 2047ರ ವೇಳೆಗೆ ವಿಶ್ವ ಮುಂಚೂಣಿಯಲ್ಲಿ ಅಗ್ರ ಸ್ಥಾನದಲ್ಲಿ ನಿಲ್ಲುವ ಭಾರತ ನಿರ್ಮಾಣದ ಯೋಜನೆ ರೂಪಿಸಲು ಇಂದು ಸಂಸತ್ತಿನಲ್ಲಿ ಮಂಡನೆಯಾಗಿರುವ ಬಜೆಟ್ ಆತ್ಮವಿಶ್ವಾಸ ತುಂಬುವ ಭರವಸೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ದೇಶದ ಕೃಷಿ, ಸಾರಿಗೆ, ಕೈಗಾರಿಕೆ, ಉದ್ಯೋಗ, ಪ್ರವಾಸೋದ್ಯಮ, ವೈದ್ಯಕೀಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವ ನೀಡುವ ಮೂಲಕ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ಮಹತ್ವಾಕಾಂಕ್ಷೆಯ ಬಜೆಟ್ ಮಂಡಿಸುವುದರೊಂದಿಗೆ ಸತತ 8 ಬಾರಿ ಬಜೆಟ್ ಮಂಡಿಸಿದ ಆರ್ಥಿಕ ತಜ್ಞತೆಯ ದಿಟ್ಟ ಮಹಿಳೆಯಾಗಿ ರಾಷ್ಟ್ರ ರಾಜಕಾರಣದಲ್ಲಿ ದಾಖಲೆ ಬರೆದಿರುವ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿಜೀ ಅವರ ಸರ್ಕಾರವು ದೇಶದ ಆರ್ಥಿಕತೆ ಸುಭದ್ರವಾಗಿಸಿ, ವಿಕಸಿತ ಭಾರತದ ನಿರ್ಮಾಣದ ಸಂಕಲ್ಪ ಈಡೇರಿಸುವ ಅತ್ಯುತ್ತಮ ಬಜೆಟ್ ಮಂಡಿಸಿದೆ. ಜನಸಾಮಾನ್ಯರಿಗೆ ಭರವಸೆ ಮೂಡಿಸುವ ಮೂಲಕ ಮಹತ್ವದ ಹೆಜ್ಜೆಯಿಟ್ಟಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

1 hour ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

1 hour ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

5 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

5 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

5 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

5 hours ago