ರಾಜ್ಯ

ಬಾಬಾ ಬುಡನ್‌ಗಿರಿ ದರ್ಗಾ ಗೋರಿ ಧ್ವಂಸ ಪ್ರಕರಣ ರೀಓಪನ್‌ ಸುಳ್ಳು: ಸಿದ್ದರಾಮಯ್ಯ

ಬಾಬಾ ಬುಡನ್‌ಗಿರಿ ದತ್ತಪೀಠ ದರ್ಗಾ ಗೋರಿ ಧ್ವಂಸ ಪ್ರಕರಣ ರೀಓಪನ್‌ ಆಗಿದೆ ಎಂಬ ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ಇದೀಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿಎಂ ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾ ಬುಡನ್‌ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣವನ್ನು ರೀಓಪನ್‌ ಮಾಡಲಾಗಿದೆ ಎಂದು ಸುದ್ದಿಯನ್ನು ಪ್ರಕಟ ಮಾಡಲಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದೆ ಎಂದು ಹೇಳಿಕೆ ನೀಡಿದ್ದಾರೆ.

2017ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯಲ್ಲಿ ಆರೋಪಿಗಳಿಗೆ ಸಮನ್ಸ್‌ ಜಾರಿಯಾಗಿದೆ ಅಷ್ಟೇ. 2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ಮಾರ್ಚ್ 19ರಂದು ವಿಚಾರಣೆಯ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಈ ಆಧಾರದ ಮೇಲೆ ಸರ್ಕಾರ 2023ರ ಸೆಪ್ಟೆಂಬರ್‌ 7ರಂದು ಅನುಮತಿ ನೀಡಿತ್ತು.

2023ರ ಅಕ್ಟೋಬರ್‌ 24ರಂದು ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಈ ಪ್ರತಿಕ್ರಿಯೆಯ ಮುಂದುವರಿದ ಭಾಗವಾಗಿ ಆರೋಪಿಗಳು ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ. ಇದೆಲ್ಲವೂ ಪ್ರತೀ ಪ್ರಕರಣದಲ್ಲಿಯೂ ನಡೆಯುವ ಸಾಮಾನ್ಯ ಪ್ರಕ್ರಿಯೆಯಾಗಿದೆ. ಸರ್ಕಾರ ಮರು ತನಿಖೆಗೆ ಮುಂದಾಗಿದೆ ಎನ್ನುವುದು ತಪ್ಪು ಹಾಗೂ ಸುಳ್ಳು ಸಂಗತಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

17 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

18 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

20 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

22 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

26 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

32 mins ago