ರಾಜ್ಯ

ವಿಧಾನಪರಿಷತ್ತಿಗೆ ಬಾಬು, ಶಿವಕುಮಾರ್, ಆರತಿ ಕೃಷ್ಣ, ಜಕ್ಕಪ್ಪನವರ್ ನಾಮನಿರ್ದೇಶನ

ಬೆಂಗಳೂರು : ವಿಧಾನ ಪರಿಷತ್ತಿನ ನಾಲ್ಕು ನಾಮ ನಿರ್ದೇಶಿತ ಸ್ಥಾನಗಳ ಆಯ್ಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಪೂರ್ಣಗೊಳಿಸಿದ್ದು ರಮೇಶ್ ಬಾಬು, ಆರತಿಕೃಷ್ಣ, ಡಾ.ಕೆ.ಶಿವಕುಮಾರ್ ಮತ್ತು ಜಕ್ಕಪ್ಪನವರ್ ಅವರಿರುವ ಪಟ್ಟಿಯನ್ನು ಅಂತಿಮಗೊಳಿಸಿದೆ.

ಕಾಂಗ್ರೆಸ್ ವರಿಷ್ಟರು ಅಂತಿಮಗೊಳಿಸಿದ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದ್ದು ಇಂದು ಅಥವಾ ನಾಳೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ. ಈ ಹಿಂದೆ ದಲಿತ ನಾಯಕ ಡಿ.ಜಿ.ಸಾಗರ್, ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಮತ್ತು ಆರತಿಕೃಷ್ಣ ಅವರಿದ್ದ ಪಟ್ಟಿಗೆ ಕಾಂಗ್ರೆಸ್ ವರಿಷ್ಟರು ಒಪ್ಪಿಗೆ ನೀಡಿದ್ದರು. ಆದರೆ ಪಟ್ಟಿಗೆ ಹಲವರ ಆಕ್ಷೇಪದ ಹಿನ್ನೆಲೆಯಲ್ಲಿ ಹೈಕಮಾಂಡ್ ತಡೆಯೊಡ್ಡಿತ್ತು, ಅದರೆ ಇದೀಗ ಮೈಸೂರಿನ ಪತ್ರಕರ್ತರಾದ ಡಾ.ಕೆ.ಶಿವಕುಮಾರ್, ಕಾರ್ಮಿಕ ನಾಯಕ ಜಕ್ಕಪ್ಪನವರ್, ಪಕ್ಷದ ವಕ್ತಾರ ರಮೇಶ್ ಬಾಬು ಮತ್ತು ಅರತಿಕೃಷ್ಣ ಅವರಿರುವ ಹೊಸ ಪಟ್ಟಿಯನ್ನು ಅಂತಿಮಗೊಳಿಸಿದೆ ಎಂದು ದಿಲ್ಲಿ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

6 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

7 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

7 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

7 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

8 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

9 hours ago