ಬೆಂಗಳೂರು : ವಿಧಾನ ಪರಿಷತ್ತಿನ ನಾಲ್ಕು ನಾಮ ನಿರ್ದೇಶಿತ ಸ್ಥಾನಗಳ ಆಯ್ಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಪೂರ್ಣಗೊಳಿಸಿದ್ದು ರಮೇಶ್ ಬಾಬು, ಆರತಿಕೃಷ್ಣ, ಡಾ.ಕೆ.ಶಿವಕುಮಾರ್ ಮತ್ತು ಜಕ್ಕಪ್ಪನವರ್ ಅವರಿರುವ ಪಟ್ಟಿಯನ್ನು ಅಂತಿಮಗೊಳಿಸಿದೆ.
ಕಾಂಗ್ರೆಸ್ ವರಿಷ್ಟರು ಅಂತಿಮಗೊಳಿಸಿದ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದ್ದು ಇಂದು ಅಥವಾ ನಾಳೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ. ಈ ಹಿಂದೆ ದಲಿತ ನಾಯಕ ಡಿ.ಜಿ.ಸಾಗರ್, ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಮತ್ತು ಆರತಿಕೃಷ್ಣ ಅವರಿದ್ದ ಪಟ್ಟಿಗೆ ಕಾಂಗ್ರೆಸ್ ವರಿಷ್ಟರು ಒಪ್ಪಿಗೆ ನೀಡಿದ್ದರು. ಆದರೆ ಪಟ್ಟಿಗೆ ಹಲವರ ಆಕ್ಷೇಪದ ಹಿನ್ನೆಲೆಯಲ್ಲಿ ಹೈಕಮಾಂಡ್ ತಡೆಯೊಡ್ಡಿತ್ತು, ಅದರೆ ಇದೀಗ ಮೈಸೂರಿನ ಪತ್ರಕರ್ತರಾದ ಡಾ.ಕೆ.ಶಿವಕುಮಾರ್, ಕಾರ್ಮಿಕ ನಾಯಕ ಜಕ್ಕಪ್ಪನವರ್, ಪಕ್ಷದ ವಕ್ತಾರ ರಮೇಶ್ ಬಾಬು ಮತ್ತು ಅರತಿಕೃಷ್ಣ ಅವರಿರುವ ಹೊಸ ಪಟ್ಟಿಯನ್ನು ಅಂತಿಮಗೊಳಿಸಿದೆ ಎಂದು ದಿಲ್ಲಿ ಮೂಲಗಳು ತಿಳಿಸಿವೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…