ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬಚ್ಚಾ ಎಂದು ಕರೆದಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಟುವಾಗಿ ಟೀಕಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಕೆ ಮಾಡಿರುವುದು ತಪ್ಪು. ಅವರ ಪದ ಬಳಕೆಯನ್ನು ಒಪ್ಪಲಾಗದು ಎಂದು ಹೇಳಿದರು.
ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಆ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು. ಇದನ್ನು ಯಾರೂ ಕೂಡ ಮರೆಯಬಾರದು. ಶಾಸಕರೊಬ್ಬರು ಈ ರೀತಿ ಮಾತನಾಡಿರುವುದು ತಪ್ಪ. ಇದನ್ನು ಒಪ್ಪಲಾಗದು ಎಂದರು.
ಇನ್ನು ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ರಮೇಶ್ ಜಾರಕಿಹೊಳಿಯವರು, ವಿಜಯೇಂದ್ರ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ಅವನಿಗೆ ನಾನು ಎಚ್ಚರಿಕೆ ಕೊಡುತ್ತೇನೆ. ನೀನು ಇನ್ನು ಬಚ್ಚಾ, ಬಿಜೆಪಿ ರಾಜ್ಯಾಧ್ಯಕ್ಷನಾಗಲು ಯೋಗ್ಯನಲ್ಲ ಎಂದು ಹೇಳಿದ್ದರು.
ನಾನು ನಿಮ್ಮ ಅಪ್ಪನನ್ನು ಸಿಎಂ ಮಾಡುವ ಸಲುವಾಗಿ ಬಿಜೆಪಿಗೆ ಬಂದಿದ್ದೇನೆ ವಿಜಯೇಂದ್ರ. ನನ್ನ ಕ್ಷೇತ್ರದ ಜನರ ನನ್ನೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ. ಯಾರ ಭಯವೂ ಇಲ್ಲ. ನೀನು ರಾಜ್ಯಾಧ್ಯಕ್ಷ
ಸ್ಥಾನದಿಂದ ಕೆಳಗಿಳಿಯಬೇಕು ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…