ರಾಜ್ಯ

ಸಾಮಾಜಿಕ, ಆರ್ಥಿಕ ಮರು ಸಮೀಕ್ಷೆ ಬೇಡ ; ಕಾಂತರಾಜ್ ಆಯೋಗ ವರದಿ ಜಾರಿಗೆ ಹಿಂದುಳಿದ ಸಮುದಾಯಗಳ ಆಗ್ರಹ

ಬೆಂಗಳೂರು : ಸಾಮಾಜಿಕ, ಆರ್ಥಿಕ ಮರು ಸಮೀಕ್ಷೆ ನಮಗೆ ಬೇಡ. ಈ ಬದಲಿಗೆ ನಮಗೆ ಕಾಂತರಾಜ್‌ ಆಯೋಗ ವರದಿ ಜಾರಿ ಆಗಲಿ ಎಂದು ಹಿಂದುಳಿದ ಸಮುದಾಯಗಳು ಆಗ್ರಹಿಸಿವೆ.

ಸಾಮಾಜಿಕ ಮತ್ತು ಶೈಕ್ಷಣಿಕ ಮರು ಸಮೀಕ್ಷೆ ಕುರಿತಂತೆ ಕರ್ನಾಟಕ ಶೋಷಿತ ಸಮುದಾಯ ಒಕ್ಕೂಟದವತಿಯಿಂದ ಶುಕ್ರವಾರ ಅಹಿಂದ ಮುಖಂಡರ ಮಹಾಸಭೆಯಲ್ಲಿ ಈ ಕುರಿತು ಗಟ್ಟಿಧ್ವನಿ ಮಾರ್ಧನಿಸಿತು.

ವಿಧಾನ ಪರಿಷತ್ ಸದಸ್ಯ ಹಾಗೂ ಒಕ್ಕೂಟದ ಸದಸ್ಯ ನಾಗರಾಜ್ ಯಾದವ್ ಮಾತನಾಡಿ, ಸಾಮಾಜಿಕ ಮತ್ತು ಆರ್ಥಿಕ ಮರು ಸಮೀಕ್ಷೆ ವಿಚಾರದಲ್ಲಿ ನಮ್ಮ ಹಿಂದುಳಿದ ಸಮಾಜಗಳು ಒಟ್ಟಾಗಿ ಅಂತರಿಕವಾಗಿ ಬಗೆಹರಿಸಿಕೊಳ್ಳಬೇಕಾಗಿದೆ, ಕಾಂತರಾಜ್ ಆಯೋಗ ವರದಿಯನ್ನು ಜಾರಿ ತರುವಂತೆ ಕಾಂಗ್ರೆಸ್ ಹೈಕಮಾಂಡ್ ಮುಖಂಡರಿಗೆ ಅರಿವು ಮೂಡಿಸಬೇಕಾಗಿದೆ. ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಏಳಿಗೆ ಕುರಿತ ಬದ್ಧತೆ ಇದೆ ಎಂದರು.

ಪ್ರಧಾನ ಸಂಚಾಲಕರಾದ ರಾಮಚಂದ್ರಪ್ಪ, ಅನಂತ್ ನಾಯ್ಕ್ ಮಾತನಾಡಿ, ಯಾವುದೋ ಒಂದು ಸಮುದಾಯವನ್ನು ಒಲೈಕೆ ಮಾಡಿಕೊಳ್ಳಲು ಇಡೀ ಹಿಂದುಳಿದ ಸಮುದಾಯದ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ, ಇರುವ ವರದಿ ತಿರಸ್ಕರಿಸಿ ಮರು ಸಮೀಕ್ಷೆ ಮಾಡಲು ಹೊರಟಿರುವುದು ಸರಿಯಲ್ಲ, ಈ ಕುರಿತು ಹಿಂದುಳಿದ ವರ್ಗಗಳಲ್ಲಿ ಜಾಗೃತಿ ಮೂಡಿಸಲಾಗುವುದು, ಜಿಲ್ಲೆಗಳಲ್ಲಿ ಮುಂದಿನ ಹೋರಾಟ ನಡೆಸುವ ಬಗ್ಗೆ ಚರ್ಚೆ ನಡೆಸಲಾಗುವುದು. ಯಾರ್ಯಾರು ಈ ವರದಿಯನ್ನು ವಿರೋಧ ಮಾಡಿದ್ದಾರೋ ಅವರಿಗೆ ಮುಂದಿನ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದರು.

ಮುಖ್ಯಮಂತ್ರಿಗಳಿಗೆ ಈ ಕುರಿತು ಮನವಿ ಮಾಡಿ ಕಾಂತರಾಜ್ ವರದಿ ಬಿಡುಗಡೆ ಮಾಡುವಂತೆ ಮನವಿ ಮಾಡೋಣ‌ ಜಾರಿಗಿಂತ ಮುಂಚೆ ಚರ್ಚೆಗೆ ಅವಕಾಶ ಕೊಡೋಣ್ಣ, ನಮಗೆ ಯಾವುದೇ ರೀತಿಯ ಹೈಕಮಾಂಡ್ ಇಲ್ಲ ಸಂವಿಧಾನವೇ ನಮಗೆ ಹೈಕಮಾಂಡ್ ಆಗಿದೆ, ಕಾಂಗ್ರೆಸ್ ಪಕ್ಷಕ್ಕೆ ಮೇಲ್ವರ್ಗದವರ ಶೇ10ರಷ್ಟು ಮತಗಳು ಬರಲ್ಲ ನಿಜವಾಗಿ ಹಿಂದುಳಿದ ವರ್ಗದವರೇ ಮತ ಹಾಕುವವರು, ಇರುವ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮುಂದುವರೆಯಬೇಕು ಅವರ ಕನಸಿನ ಯೋಜನೆಗಳು ಜಾರಿಯಾಗಬೇಕು, ಮರು ಸಮೀಕ್ಷೆ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೆ ಪತ್ರ ಬರೆಯೋಣ, ಮುಂದಿನ ದಿನಗಳಲ್ಲಿ ರಾಜ್ಯದೆಲ್ಲಡೆ ಈ ಕುರಿತು ಹೋರಾಟ ಮಾಡೋಣ ಎಂದರು.

ವಿನಯ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಹಿಂದುಳಿದವರ ಹೆಸರು ಹೇಳಿಕೊಂಡು, ಅವರಿಂದ ಮತ ಪಡೆದು ಅಧಿಕಾರಕ್ಕೆ ಬಂದಿದೆ ಪ್ರಸ್ತುತ ಹಿಂದುಳಿದ ವರ್ಗದವರ ಏಳಿಗೆಗೆ ಸಂಬಂಧಿಸಿದ ಸಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯನ್ನು ಎರಡು ಪ್ರಬಲ ಜಾತಿಗಳ ಒತ್ತಡಕ್ಕೆ ಮಣಿದು ಜಾರಿ ತರದೇ ಕಳ್ಳಾಟವಾಡುತ್ತಿದೆ, ಈ ಕುರಿತಂತೆ ಹೋಬಳಿ, ಗ್ರಾಮ ಮಟ್ಟದಲ್ಲಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.

ವಿವಿಧ ಹಿಂದುಳಿದ ಸಮಾಜದ ಮುಖಂಡರು ಮಾತನಾಡಿ, ಸಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಮರು ಸಮೀಕ್ಷೆ ನಡೆಸಬಾರದು, ಕಾಂತರಾಜ್ ಆಯೋಗ ವರದಿಯನ್ನು ಜಾರಿಗೊಳಿಸುವಂತೆ ರಾಜ್ಯದೆಲ್ಲಡೆ ಹೋರಾಟ ನಡೆಸಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಎಣ್ಣೆಗೆರೆ ವೆಂಕಟರಾಮಯ್ಯ, ಆದರ್ಶ ಯಲ್ಲಪ್ಪ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯರಾದ ಗೋಪಾಲ್, ಕುರುಬರ ಸಂಘದ ಅಧ್ಯಕ್ಷರಾದ ಈರಣ್ಣ, ರಾಮಕೃಷ್ಣ, ಈಡಿಗ ಸಮಾಜದ ಮುಖಂಡೆ ನಳಿನಾಕ್ಷಿ ಸಣ್ಣಪ್ಪ ಸೇರಿದಂತೆ ವಿವಿಧ ಹಿಂದುಳಿದ ಸಮಾಜಗಳ ಮುಖಂಡರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

20 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

20 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

2 days ago