ರಾಜ್ಯ

ಸಾಮಾಜಿಕ, ಆರ್ಥಿಕ ಮರು ಸಮೀಕ್ಷೆ ಬೇಡ ; ಕಾಂತರಾಜ್ ಆಯೋಗ ವರದಿ ಜಾರಿಗೆ ಹಿಂದುಳಿದ ಸಮುದಾಯಗಳ ಆಗ್ರಹ

ಬೆಂಗಳೂರು : ಸಾಮಾಜಿಕ, ಆರ್ಥಿಕ ಮರು ಸಮೀಕ್ಷೆ ನಮಗೆ ಬೇಡ. ಈ ಬದಲಿಗೆ ನಮಗೆ ಕಾಂತರಾಜ್‌ ಆಯೋಗ ವರದಿ ಜಾರಿ ಆಗಲಿ ಎಂದು ಹಿಂದುಳಿದ ಸಮುದಾಯಗಳು ಆಗ್ರಹಿಸಿವೆ.

ಸಾಮಾಜಿಕ ಮತ್ತು ಶೈಕ್ಷಣಿಕ ಮರು ಸಮೀಕ್ಷೆ ಕುರಿತಂತೆ ಕರ್ನಾಟಕ ಶೋಷಿತ ಸಮುದಾಯ ಒಕ್ಕೂಟದವತಿಯಿಂದ ಶುಕ್ರವಾರ ಅಹಿಂದ ಮುಖಂಡರ ಮಹಾಸಭೆಯಲ್ಲಿ ಈ ಕುರಿತು ಗಟ್ಟಿಧ್ವನಿ ಮಾರ್ಧನಿಸಿತು.

ವಿಧಾನ ಪರಿಷತ್ ಸದಸ್ಯ ಹಾಗೂ ಒಕ್ಕೂಟದ ಸದಸ್ಯ ನಾಗರಾಜ್ ಯಾದವ್ ಮಾತನಾಡಿ, ಸಾಮಾಜಿಕ ಮತ್ತು ಆರ್ಥಿಕ ಮರು ಸಮೀಕ್ಷೆ ವಿಚಾರದಲ್ಲಿ ನಮ್ಮ ಹಿಂದುಳಿದ ಸಮಾಜಗಳು ಒಟ್ಟಾಗಿ ಅಂತರಿಕವಾಗಿ ಬಗೆಹರಿಸಿಕೊಳ್ಳಬೇಕಾಗಿದೆ, ಕಾಂತರಾಜ್ ಆಯೋಗ ವರದಿಯನ್ನು ಜಾರಿ ತರುವಂತೆ ಕಾಂಗ್ರೆಸ್ ಹೈಕಮಾಂಡ್ ಮುಖಂಡರಿಗೆ ಅರಿವು ಮೂಡಿಸಬೇಕಾಗಿದೆ. ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಏಳಿಗೆ ಕುರಿತ ಬದ್ಧತೆ ಇದೆ ಎಂದರು.

ಪ್ರಧಾನ ಸಂಚಾಲಕರಾದ ರಾಮಚಂದ್ರಪ್ಪ, ಅನಂತ್ ನಾಯ್ಕ್ ಮಾತನಾಡಿ, ಯಾವುದೋ ಒಂದು ಸಮುದಾಯವನ್ನು ಒಲೈಕೆ ಮಾಡಿಕೊಳ್ಳಲು ಇಡೀ ಹಿಂದುಳಿದ ಸಮುದಾಯದ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ, ಇರುವ ವರದಿ ತಿರಸ್ಕರಿಸಿ ಮರು ಸಮೀಕ್ಷೆ ಮಾಡಲು ಹೊರಟಿರುವುದು ಸರಿಯಲ್ಲ, ಈ ಕುರಿತು ಹಿಂದುಳಿದ ವರ್ಗಗಳಲ್ಲಿ ಜಾಗೃತಿ ಮೂಡಿಸಲಾಗುವುದು, ಜಿಲ್ಲೆಗಳಲ್ಲಿ ಮುಂದಿನ ಹೋರಾಟ ನಡೆಸುವ ಬಗ್ಗೆ ಚರ್ಚೆ ನಡೆಸಲಾಗುವುದು. ಯಾರ್ಯಾರು ಈ ವರದಿಯನ್ನು ವಿರೋಧ ಮಾಡಿದ್ದಾರೋ ಅವರಿಗೆ ಮುಂದಿನ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದರು.

ಮುಖ್ಯಮಂತ್ರಿಗಳಿಗೆ ಈ ಕುರಿತು ಮನವಿ ಮಾಡಿ ಕಾಂತರಾಜ್ ವರದಿ ಬಿಡುಗಡೆ ಮಾಡುವಂತೆ ಮನವಿ ಮಾಡೋಣ‌ ಜಾರಿಗಿಂತ ಮುಂಚೆ ಚರ್ಚೆಗೆ ಅವಕಾಶ ಕೊಡೋಣ್ಣ, ನಮಗೆ ಯಾವುದೇ ರೀತಿಯ ಹೈಕಮಾಂಡ್ ಇಲ್ಲ ಸಂವಿಧಾನವೇ ನಮಗೆ ಹೈಕಮಾಂಡ್ ಆಗಿದೆ, ಕಾಂಗ್ರೆಸ್ ಪಕ್ಷಕ್ಕೆ ಮೇಲ್ವರ್ಗದವರ ಶೇ10ರಷ್ಟು ಮತಗಳು ಬರಲ್ಲ ನಿಜವಾಗಿ ಹಿಂದುಳಿದ ವರ್ಗದವರೇ ಮತ ಹಾಕುವವರು, ಇರುವ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮುಂದುವರೆಯಬೇಕು ಅವರ ಕನಸಿನ ಯೋಜನೆಗಳು ಜಾರಿಯಾಗಬೇಕು, ಮರು ಸಮೀಕ್ಷೆ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೆ ಪತ್ರ ಬರೆಯೋಣ, ಮುಂದಿನ ದಿನಗಳಲ್ಲಿ ರಾಜ್ಯದೆಲ್ಲಡೆ ಈ ಕುರಿತು ಹೋರಾಟ ಮಾಡೋಣ ಎಂದರು.

ವಿನಯ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಹಿಂದುಳಿದವರ ಹೆಸರು ಹೇಳಿಕೊಂಡು, ಅವರಿಂದ ಮತ ಪಡೆದು ಅಧಿಕಾರಕ್ಕೆ ಬಂದಿದೆ ಪ್ರಸ್ತುತ ಹಿಂದುಳಿದ ವರ್ಗದವರ ಏಳಿಗೆಗೆ ಸಂಬಂಧಿಸಿದ ಸಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯನ್ನು ಎರಡು ಪ್ರಬಲ ಜಾತಿಗಳ ಒತ್ತಡಕ್ಕೆ ಮಣಿದು ಜಾರಿ ತರದೇ ಕಳ್ಳಾಟವಾಡುತ್ತಿದೆ, ಈ ಕುರಿತಂತೆ ಹೋಬಳಿ, ಗ್ರಾಮ ಮಟ್ಟದಲ್ಲಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.

ವಿವಿಧ ಹಿಂದುಳಿದ ಸಮಾಜದ ಮುಖಂಡರು ಮಾತನಾಡಿ, ಸಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಮರು ಸಮೀಕ್ಷೆ ನಡೆಸಬಾರದು, ಕಾಂತರಾಜ್ ಆಯೋಗ ವರದಿಯನ್ನು ಜಾರಿಗೊಳಿಸುವಂತೆ ರಾಜ್ಯದೆಲ್ಲಡೆ ಹೋರಾಟ ನಡೆಸಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಎಣ್ಣೆಗೆರೆ ವೆಂಕಟರಾಮಯ್ಯ, ಆದರ್ಶ ಯಲ್ಲಪ್ಪ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯರಾದ ಗೋಪಾಲ್, ಕುರುಬರ ಸಂಘದ ಅಧ್ಯಕ್ಷರಾದ ಈರಣ್ಣ, ರಾಮಕೃಷ್ಣ, ಈಡಿಗ ಸಮಾಜದ ಮುಖಂಡೆ ನಳಿನಾಕ್ಷಿ ಸಣ್ಣಪ್ಪ ಸೇರಿದಂತೆ ವಿವಿಧ ಹಿಂದುಳಿದ ಸಮಾಜಗಳ ಮುಖಂಡರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

7 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

8 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

12 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

14 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

15 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

16 hours ago