ರಾಜ್ಯ

ಶವರ್ಮಾದಲ್ಲೂ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆ , ಬ್ಯಾನ್ ಗೆ ಚಿಂತನೆ

ಬೆಂಗಳೂರು : ಇತ್ತೀಚೆಗೆ ಆಹಾರ ಮತ್ತು ಗುಣಮಟ್ಟ ಇಲಾಖೆಯೂ ನಡೆಸಿದ  ಪರೀಕ್ಷೆಯಲ್ಲಿ ಗೋಬಿ, ಕಬಾಬ್‌ , ಪಾನಿಪುರಿಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳು ಪತ್ತೆಯಾಗಿದ್ದವು. ಬಳಿಕ ಇಲಾಖೆಯು ಗೋಬಿ, ಕಬಾಬ್‌ , ಕಾಟನ್‌ ಕ್ಯಾಂಡಿ ತಯಾರಿಕೆಯಲ್ಲಿ ಬಳಸುವ ಕೃತಕ ಬಣ್ಣಗಳನ್ನಬ್ಯಾನ್‌ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಈ ಪಟ್ಟಿಯಲ್ಲಿ ಶವರ್ಮಾ ಕೂಡ ಸೇರ್ಪಡೆಗೊಳ್ಳುತ್ತಿದೆ. ಗೋಬಿ, ಕಬಾಬ್‌ ಕಾಟನ್‌ ಕ್ಯಾಂಡಿ ಬಳಿಕ ಶವರ್ಮಾ ಬ್ಯಾನ್‌ ಮಾಡಲು ಚಿಂತನೆ ನಡೆದಿದೆ.

ಆಹಾರ ಮತ್ತು ಗುಣಮಟ್ಟ ಇಲಾಖೆಯೂ ರಾಜ್ಯದ ವಿವಿಧೆಡೆಯಿಂದ ತಂದ ೧೭ ಶವರ್ಮಾ ಮಾದರಿ ಪರೀಕ್ಷೆ ನಡೆಸಲಾಗಿದ್ದು ಈ ೧೭ ರ ಪೈಕಿ ೮  ಮಾದರಿಯಲ್ಲಿ ಬ್ಯಾಕ್ಟೀರಿಯಾ ಈಸ್ಟ್‌ ಪತ್ತೆಯಾಗಿದೆ. ಸರಿಯಾದ ರೀತಿಯಲ್ಲಿ ಆಹಾರ ತಯಾರಿಸದ ಕಾರಣ ಬ್ಯಾಕ್ಟೀರಿಯಾಗಳು ಪತ್ತೆಯಾಗಿದೆ. ಈಗಾಗಲೇ ಅಸುರಕ್ಷಿತ ಶವರ್ಮಾ ನೀಡಿರುವ ಅಂಗಡಿಗಳ ವಿರುದ್ಧ ಇಲಾಖೆ ಸೂಕ್ತವಾದ ಕ್ರಮಕೈಗೊಂಡಿದೆ. ಎಲ್ಲಾ ಶವರ್ಮಾ ಮಾರಾಟಗಾರರಿಗೆ ಏಫ್‌ ಎಸ್‌ ಎಸ್‌ ಎಐ ನೋಂದಣಿ ಮಾಡುವುದು ಕಡ್ಡಾಯಗೊಳಿಸಲಾಗಿದೆ. ನೋಂದಣಿ ಪತ್ರ ಪ್ರದರ್ಶನ ಮಾಡದಿದ್ರೆ ಮಾರಾಟಕ್ಕೆ ಬ್ಯಾನ್‌ ಮಾಡುವ ಎಚ್ಚರಿಕೆಯನ್ನ ನೀಡಲಾಗಿದೆ.  ಅಲ್ಲದೆ ಶವರ್ಮಾ ತಯಾರಿಕೆಯ ವೇಳೆ ಶುಚಿತ್ವ ಕಾಪಾಡುವಂತೆ ಸೂಚನೆ ನೀಡಲಾಗಿದ್ದು, ಶುಚಿತ್ವ ನಿರ್ವಹಣೆ ಹಾಗೂ ನೋಂದಣಿ ಮಾಡಿಸದಿದ್ರೆ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

2 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

6 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

6 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

6 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

6 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

6 hours ago