ರಾಜ್ಯ

ಶವರ್ಮಾದಲ್ಲೂ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆ , ಬ್ಯಾನ್ ಗೆ ಚಿಂತನೆ

ಬೆಂಗಳೂರು : ಇತ್ತೀಚೆಗೆ ಆಹಾರ ಮತ್ತು ಗುಣಮಟ್ಟ ಇಲಾಖೆಯೂ ನಡೆಸಿದ  ಪರೀಕ್ಷೆಯಲ್ಲಿ ಗೋಬಿ, ಕಬಾಬ್‌ , ಪಾನಿಪುರಿಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳು ಪತ್ತೆಯಾಗಿದ್ದವು. ಬಳಿಕ ಇಲಾಖೆಯು ಗೋಬಿ, ಕಬಾಬ್‌ , ಕಾಟನ್‌ ಕ್ಯಾಂಡಿ ತಯಾರಿಕೆಯಲ್ಲಿ ಬಳಸುವ ಕೃತಕ ಬಣ್ಣಗಳನ್ನಬ್ಯಾನ್‌ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಈ ಪಟ್ಟಿಯಲ್ಲಿ ಶವರ್ಮಾ ಕೂಡ ಸೇರ್ಪಡೆಗೊಳ್ಳುತ್ತಿದೆ. ಗೋಬಿ, ಕಬಾಬ್‌ ಕಾಟನ್‌ ಕ್ಯಾಂಡಿ ಬಳಿಕ ಶವರ್ಮಾ ಬ್ಯಾನ್‌ ಮಾಡಲು ಚಿಂತನೆ ನಡೆದಿದೆ.

ಆಹಾರ ಮತ್ತು ಗುಣಮಟ್ಟ ಇಲಾಖೆಯೂ ರಾಜ್ಯದ ವಿವಿಧೆಡೆಯಿಂದ ತಂದ ೧೭ ಶವರ್ಮಾ ಮಾದರಿ ಪರೀಕ್ಷೆ ನಡೆಸಲಾಗಿದ್ದು ಈ ೧೭ ರ ಪೈಕಿ ೮  ಮಾದರಿಯಲ್ಲಿ ಬ್ಯಾಕ್ಟೀರಿಯಾ ಈಸ್ಟ್‌ ಪತ್ತೆಯಾಗಿದೆ. ಸರಿಯಾದ ರೀತಿಯಲ್ಲಿ ಆಹಾರ ತಯಾರಿಸದ ಕಾರಣ ಬ್ಯಾಕ್ಟೀರಿಯಾಗಳು ಪತ್ತೆಯಾಗಿದೆ. ಈಗಾಗಲೇ ಅಸುರಕ್ಷಿತ ಶವರ್ಮಾ ನೀಡಿರುವ ಅಂಗಡಿಗಳ ವಿರುದ್ಧ ಇಲಾಖೆ ಸೂಕ್ತವಾದ ಕ್ರಮಕೈಗೊಂಡಿದೆ. ಎಲ್ಲಾ ಶವರ್ಮಾ ಮಾರಾಟಗಾರರಿಗೆ ಏಫ್‌ ಎಸ್‌ ಎಸ್‌ ಎಐ ನೋಂದಣಿ ಮಾಡುವುದು ಕಡ್ಡಾಯಗೊಳಿಸಲಾಗಿದೆ. ನೋಂದಣಿ ಪತ್ರ ಪ್ರದರ್ಶನ ಮಾಡದಿದ್ರೆ ಮಾರಾಟಕ್ಕೆ ಬ್ಯಾನ್‌ ಮಾಡುವ ಎಚ್ಚರಿಕೆಯನ್ನ ನೀಡಲಾಗಿದೆ.  ಅಲ್ಲದೆ ಶವರ್ಮಾ ತಯಾರಿಕೆಯ ವೇಳೆ ಶುಚಿತ್ವ ಕಾಪಾಡುವಂತೆ ಸೂಚನೆ ನೀಡಲಾಗಿದ್ದು, ಶುಚಿತ್ವ ನಿರ್ವಹಣೆ ಹಾಗೂ ನೋಂದಣಿ ಮಾಡಿಸದಿದ್ರೆ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

11 mins ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

23 mins ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

25 mins ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

26 mins ago

ಓದುಗರ ಪತ್ರ: ವಿಷಯದ ಗಂಭೀರತೆ ಮರೆತ ಪೊಲೀಸರು

ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…

28 mins ago

ಓದುಗರ ಪತ್ರ: ಇಂಧನದ ಮೇಲಿನ ತೆರಿಗೆ ಇಳಿಸಿ

ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…

33 mins ago