ರಾಜ್ಯ

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯ ವೀರಣ್ಣ ಚರಂತಿಮಠ ವಿರುದ್ಧ 19,944 ಮತಗಳ ಅಂತರದಿಂದ ಗೆದ್ದು ಮೇಟಿ ಕುಟುಂಬದ ಹಿಡಿತವನ್ನು ಮತ್ತಷ್ಟು ಭದ್ರಪಡಿಸಿದ್ದಾರೆ.

ಸುತ್ತು ಸುತ್ತಿನಲ್ಲೂ ‘ಕೈ’ ಮೇಲುಗೈ
23 ಸುತ್ತಿನ ಮತ ಎಣಿಕೆಯಲ್ಲಿ 22ನೇ ಸುತ್ತಿನ ಅಂತ್ಯಕ್ಕೆ ಉಮೇಶ್ ಮೇಟಿ 92,856 ಮತಗಳನ್ನು ಪಡೆದರೆ, ಬಿಜೆಪಿಯ ವೀರಣ್ಣ ಚರಂತಿಮಠ 72,912 ಮತಗಳಿಗೆ ತೃಪ್ತಿಪಡಬೇಕಾಯಿತು. ಎರಡನೇ ಸುತ್ತಿನಲ್ಲೇ 5,000 ಮತಗಳ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್, ಕೊನೆವರೆಗೂ ಅದನ್ನು ಕಾಯ್ದುಕೊಂಡಿತು.

ಅನುಕಂಪ – ಗ್ಯಾರಂಟಿ ; ಗೆಲುವಿನ ಸೂತ್ರ
‘ಇದು ಕೇವಲ ವ್ಯಕ್ತಿಯ ಗೆಲುವಲ್ಲ, ರಾಜ್ಯ ಸರ್ಕಾರದ ಜನಪರ ಯೋಜನೆಗಳಿಗೆ ಸಿಕ್ಕ ಜಯ’ ಎಂದು ಉಮೇಶ್ ಮೇಟಿ ಸಹೋದರ ಮಲ್ಲಿಕಾರ್ಜುನ ಮೇಟಿ ಪ್ರತಿಕ್ರಿಯಿಸಿದರು. ‘ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು, ಅಹಿಂದ ವರ್ಗದ ಬೆಂಬಲ ನಮಗೆ ದೊಡ್ಡ ಶಕ್ತಿಯಾಯಿತು’ ಎಂದರು.

ಸಿದ್ದರಾಮಯ್ಯ ಆಡಳಿತಕ್ಕೆ ಜನಮನ್ನಣೆ?
ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಬೀಡುಬಿಟ್ಟು ಪ್ರಚಾರ ನಡೆಸಿದ್ದರು. ಈ ಫಲಿತಾಂಶ ಸಿದ್ದರಾಮಯ್ಯ ಸರ್ಕಾರದ ಆಡಳಿತಕ್ಕೆ ಜನ ಮನ್ನಣೆ ನೀಡಿದಂತಾಗಿದೆ.

ಮೇಟಿ ಕುಟುಂಬದ ಭದ್ರಕೋಟೆ
2023ರ ಚುನಾವಣೆಯಲ್ಲಿ ಎಚ್.ವೈ. ಮೇಟಿ 79,336 ಮತಗಳಿಂದ ಗೆದ್ದಿದ್ದರು. ಈಗ ಪುತ್ರ ಉಮೇಶ್ ಮೇಟಿ ಅದೇ ಕ್ಷೇತ್ರವನ್ನು ಉಳಿಸಿಕೊಂಡು ವಿಧಾನಸಭೆ ಪ್ರವೇಶಿಸಿದ್ದಾರೆ. ಮೇಟಿ ಕುಟುಂಬದ ಹಿಡಿತ ಜಿಲ್ಲೆಯ ರಾಜಕಾರಣದಲ್ಲಿ ಮತ್ತಷ್ಟು ಗಟ್ಟಿಯಾಗಿದೆ.

ಬಾಗಲಕೋಟೆ ಜಿಲ್ಲಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಅಧಿಕೃತ ಘೋಷಣೆ ಒಂದೇ ಬಾಕಿ ಇದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

15 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

15 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

15 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

15 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

15 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

18 hours ago