ಬೆಂಗಳೂರು: ಬಿಜೆಪಿಯೂ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುವ ನೈತಿಕತೆ ಅವರಿಗೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರವೇ ಕೇಂದ್ರದಿಂದ ಪೆಟ್ರೋಲ್ ಮತ್ತು ರೈಲ್ವೆ ಟಿಕೆಟ್ ಬೆಲೆ ಏರಿಕೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿಯೂ ದರವನ್ನು ಏರಿಕೆ ಮಾಡಲಾಗಿದೆ ಎಂದು ಹೇಳಿದರು.
ಬಿಜೆಪಿಯವರು ಪ್ರತಿಭಟನೆ ಮಾಡಿದರೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಬರಬೇಕಾಗಿರುವ ಅನುದಾನವನ್ನು ಕೊಡಿಸಲಿ. ಅದನ್ನು ಬಿಟ್ಟು ನಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ನೈತಿಕತೆ ಅವರಿಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತ ಉತ್ತಮವಾಗಿದೆ. ಆದರೆ ಬಿಜೆಪಿ ನಾಯಕರೇ ವಿನಃ ಕಾರಣ ಕ್ಷುಲ್ಲಕ ಕಾರಣಗಳಿಗೆ ಪ್ರತಿಭಟನೆ ನಡೆಸಿ ಜಾತಿಗಳ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…
ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…