ರಾಜ್ಯ

ಅರಣ್ಯ ಪ್ರದೇಶದೊಳಗೆ ಜಾನುವಾರು ಮೇಯಿಸಲು ನಿಷೇಧ : ಕ್ರಮವಹಿಸಲು ಸಚಿವರ ಸೂಚನೆ

ಬೆಂಗಳೂರು : ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೆ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ.

ದೊಡ್ಡ ಸಂಖ್ಯೆಯ ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ.

ಅರಣ್ಯ ಸಂವರ್ಧನೆಯಾಗದಿದ್ದರೆ ಅದು ಆ ಅರಣ್ಯದಲ್ಲಿ ಹರಿಯುವ ನದಿಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗುತ್ತದೆ, ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶ ಇರುವುದಿಲ್ಲ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು, ಪರಿಸರವಾದಿಗಳು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಕಾನೂನು ರೀತ್ಯ ಕ್ರಮವಹಿಸಲು ಸೂಚಿಸಿದ್ದಾರೆ.

ಕಾಡಿನಲ್ಲಿರುವ ವನ್ಯಜೀವಿಗಳು ಮೇಯಲು ಹೋದ ದನಕರುಗಳನ್ನು ಕೊಂದಾಗ, ಆಕ್ರೋಶಗೊಂಡು ಕೆಲವರು ಮೃತ ಜಾನುವಾರುಗಳಿಗೆ ವಿಷಹಾಕುವ ಕಾರಣ ವನ್ಯಜೀವಿಗಳು ಸಾವಿಗೀಡಾಗುತ್ತವೆ. ಇದಕ್ಕೆ ಇತ್ತೀಚೆಗೆ ಹೂಗ್ಯಂ ವಲಯದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಸಾವಿಗೀಡಾಗಿರುವುದೇ ಸಾಕ್ಷಿಯಾಗಿದೆ ಎಂದೂ ಪರಿಸರ ಪ್ರೇಮಿಗಳು ಅಭಿಪ್ರಾಯಪಟ್ಟಿರುತ್ತಾರೆ ಎಂದು ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.

ಮಿಗಿಲಾಗಿ ಮದ್ರಾಸ್ ಹೈಕೋರ್ಟ್ “ತಮಿಳುನಾಡಿನ ಅರಣ್ಯದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದರ ವಿರುದ್ಧ ನೀಡಿದ ತೀರ್ಪಿನ ಬಳಿಕ, ನೆರೆಯ ರಾಜ್ಯದಿಂದಲೂ ನಮ್ಮ ರಾಜ್ಯಕ್ಕೆ ದನಕರುಗಳನ್ನು ತಂದು ಕಾಡಿನಲ್ಲಿ ಮೇಯಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯದ ಅರಣ್ಯಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಲು ಬಿಡುವುದನ್ನು ನಿರ್ಬಂಧಿಸಲು ಮತ್ತು ನಿಷೇಧಿಸಲು ನಿಯಮಾನುಸಾರ ಕ್ರಮವಹಿಸಲು ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

10 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

10 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

15 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

17 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

19 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

19 hours ago