ಬೆಂಗಳೂರು : ಜೈವಿಕವಾಗಿ ವಿಘಟನೆಯಾಗುವ ಕೈಚೀಲ (ಕ್ಯಾರಿ ಬ್ಯಾಗ್)ಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ಅವಕಾಶ ಆಗುವಂತೆ 2016ರ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ವ್ಯಾಖ್ಯಾನಕ್ಕೆ ತಿದ್ದುಪಡಿ ತರಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು, 2016ರ ಸರ್ಕಾರದ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ, ಪ್ಲಾಸ್ಟಿಕ್ ಹಾಳೆಗಳ ತಯಾರಿಕೆ, ಮಾರಾಟ, ದಾಸ್ತಾನು ನಿಷೇಧಿಸಲಾಗಿತ್ತು. ಆದರೆ ಇತ್ತೀಚೆಗೆ ಸಸ್ಯಜನ್ಯ ಕೈಚೀಲಗಳ ಆವಿಷ್ಕಾರವಾಗಿದ್ದು, ಇದು 180 ದಿನಗಳಲ್ಲಿ ಜೈವಿತವಾಗಿ ವಿಘಟನೆಯಾಗುತ್ತದೆ, ಹೀಗಾಗಿ ಇದರ ಮಾರಾಟಕ್ಕೆ ಅನುಕೂಲವಾಗುವಂತೆ ತಿದ್ದುಪಡಿ ತರಲಾಗಿದ್ದು, ಸಚಿವ ಸಂಪುಟ ಸಮ್ಮತಿ ನೀಡಿದೆ ಎಂದರು.
ಈ ಹಿಂದೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ತಾವು 2016ರ ಅಧಿಸೂಚನೆಗೆ ತಿದ್ದುಪಡಿ ತಂದು, ಕೇಂದ್ರ ಪರಿಸರ ಇಲಾಖೆಯ 2021ರ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದಾಗಿ ಸ್ಮರಿಸಿದರು.
ಪರಿಸರಕ್ಕೆ ಹಾನಿಕಾರಕವಲ್ಲದ ಮತ್ತು ಜೈವಿಕವಾಗಿ ವಿಘಟನೆಯಾಗುವ (ಬಯೋ ಡೀಗ್ರೇಡಬಲ್ -ಕಂಪೋಸ್ಟಬಲ್) ಕೈಚೀಲಗಳನ್ನು ಮತ್ತು ಮೊದಲೇ ಪ್ಯಾಕ್ ಮಾಡಿ ಸೀಲ್ ಮಾಡಿದ ಪ್ಯಾಕೇಜಿಂಗ್ ಪ್ಲಾಸ್ಟಿಕ್ ಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಲಾಗಿದೆ. ಇದು ಕೇಂದ್ರ ಸರ್ಕಾರದ 21ರ ಆದೇಶಕ್ಕೆ ಅನುಗುಣವಾಗಿದೆ ಎಂದು ತಿಳಿಸಿದರು.
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…