ಬೆಂಗಳೂರು : ಜೈವಿಕವಾಗಿ ವಿಘಟನೆಯಾಗುವ ಕೈಚೀಲ (ಕ್ಯಾರಿ ಬ್ಯಾಗ್)ಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ಅವಕಾಶ ಆಗುವಂತೆ 2016ರ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ವ್ಯಾಖ್ಯಾನಕ್ಕೆ ತಿದ್ದುಪಡಿ ತರಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು, 2016ರ ಸರ್ಕಾರದ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ, ಪ್ಲಾಸ್ಟಿಕ್ ಹಾಳೆಗಳ ತಯಾರಿಕೆ, ಮಾರಾಟ, ದಾಸ್ತಾನು ನಿಷೇಧಿಸಲಾಗಿತ್ತು. ಆದರೆ ಇತ್ತೀಚೆಗೆ ಸಸ್ಯಜನ್ಯ ಕೈಚೀಲಗಳ ಆವಿಷ್ಕಾರವಾಗಿದ್ದು, ಇದು 180 ದಿನಗಳಲ್ಲಿ ಜೈವಿತವಾಗಿ ವಿಘಟನೆಯಾಗುತ್ತದೆ, ಹೀಗಾಗಿ ಇದರ ಮಾರಾಟಕ್ಕೆ ಅನುಕೂಲವಾಗುವಂತೆ ತಿದ್ದುಪಡಿ ತರಲಾಗಿದ್ದು, ಸಚಿವ ಸಂಪುಟ ಸಮ್ಮತಿ ನೀಡಿದೆ ಎಂದರು.
ಈ ಹಿಂದೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ತಾವು 2016ರ ಅಧಿಸೂಚನೆಗೆ ತಿದ್ದುಪಡಿ ತಂದು, ಕೇಂದ್ರ ಪರಿಸರ ಇಲಾಖೆಯ 2021ರ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದಾಗಿ ಸ್ಮರಿಸಿದರು.
ಪರಿಸರಕ್ಕೆ ಹಾನಿಕಾರಕವಲ್ಲದ ಮತ್ತು ಜೈವಿಕವಾಗಿ ವಿಘಟನೆಯಾಗುವ (ಬಯೋ ಡೀಗ್ರೇಡಬಲ್ -ಕಂಪೋಸ್ಟಬಲ್) ಕೈಚೀಲಗಳನ್ನು ಮತ್ತು ಮೊದಲೇ ಪ್ಯಾಕ್ ಮಾಡಿ ಸೀಲ್ ಮಾಡಿದ ಪ್ಯಾಕೇಜಿಂಗ್ ಪ್ಲಾಸ್ಟಿಕ್ ಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಲಾಗಿದೆ. ಇದು ಕೇಂದ್ರ ಸರ್ಕಾರದ 21ರ ಆದೇಶಕ್ಕೆ ಅನುಗುಣವಾಗಿದೆ ಎಂದು ತಿಳಿಸಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…