ಬೆಂಗಳೂರು : ಜೈವಿಕವಾಗಿ ವಿಘಟನೆಯಾಗುವ ಕೈಚೀಲ (ಕ್ಯಾರಿ ಬ್ಯಾಗ್)ಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ಅವಕಾಶ ಆಗುವಂತೆ 2016ರ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ವ್ಯಾಖ್ಯಾನಕ್ಕೆ ತಿದ್ದುಪಡಿ ತರಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು, 2016ರ ಸರ್ಕಾರದ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ, ಪ್ಲಾಸ್ಟಿಕ್ ಹಾಳೆಗಳ ತಯಾರಿಕೆ, ಮಾರಾಟ, ದಾಸ್ತಾನು ನಿಷೇಧಿಸಲಾಗಿತ್ತು. ಆದರೆ ಇತ್ತೀಚೆಗೆ ಸಸ್ಯಜನ್ಯ ಕೈಚೀಲಗಳ ಆವಿಷ್ಕಾರವಾಗಿದ್ದು, ಇದು 180 ದಿನಗಳಲ್ಲಿ ಜೈವಿತವಾಗಿ ವಿಘಟನೆಯಾಗುತ್ತದೆ, ಹೀಗಾಗಿ ಇದರ ಮಾರಾಟಕ್ಕೆ ಅನುಕೂಲವಾಗುವಂತೆ ತಿದ್ದುಪಡಿ ತರಲಾಗಿದ್ದು, ಸಚಿವ ಸಂಪುಟ ಸಮ್ಮತಿ ನೀಡಿದೆ ಎಂದರು.
ಈ ಹಿಂದೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ತಾವು 2016ರ ಅಧಿಸೂಚನೆಗೆ ತಿದ್ದುಪಡಿ ತಂದು, ಕೇಂದ್ರ ಪರಿಸರ ಇಲಾಖೆಯ 2021ರ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದಾಗಿ ಸ್ಮರಿಸಿದರು.
ಪರಿಸರಕ್ಕೆ ಹಾನಿಕಾರಕವಲ್ಲದ ಮತ್ತು ಜೈವಿಕವಾಗಿ ವಿಘಟನೆಯಾಗುವ (ಬಯೋ ಡೀಗ್ರೇಡಬಲ್ -ಕಂಪೋಸ್ಟಬಲ್) ಕೈಚೀಲಗಳನ್ನು ಮತ್ತು ಮೊದಲೇ ಪ್ಯಾಕ್ ಮಾಡಿ ಸೀಲ್ ಮಾಡಿದ ಪ್ಯಾಕೇಜಿಂಗ್ ಪ್ಲಾಸ್ಟಿಕ್ ಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಲಾಗಿದೆ. ಇದು ಕೇಂದ್ರ ಸರ್ಕಾರದ 21ರ ಆದೇಶಕ್ಕೆ ಅನುಗುಣವಾಗಿದೆ ಎಂದು ತಿಳಿಸಿದರು.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…