ರಾಜ್ಯ

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್

• ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ, ಅಂಗೀಕಾರ

• ಆಯಾ ಪ್ರದೇಶಗಳಿಗೆ ಅನುಗುಣವಾಗಿ ಜಾಹೀರಾತು ಶುಲ್ಕ ನಿಗದಿ

ವಿಧಾನಸಭೆ : ರಾಜ್ಯಾದ್ಯಂತ ಪ್ಲಾಸ್ಟಿಕ್ ಫ್ಲೆಕ್ಸ್, ಬಂಟಿಂಗ್ಸ್ ಮತ್ತು ಜಾಹೀರಾತು ಫಲಕಗಳನ್ನು ನಿಷೇಧಿಸಲಾಗಿದ್ದು, ಅನಧಿಕೃತ ಜಾಹೀರಾತುಗಳನ್ನು ಮುಲಾಜಿಲ್ಲದೇ ತೆರವುಗೊಳಿಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಸೋಮವಾರ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಮಹಾನಗರ ಪಾಲಿಕೆಗಳಲ್ಲಿ ಜಾಹೀರಾತು ಶುಲ್ಕ ನಿಗದಿಪಡಿಸಿ ಕಾನೂನನ್ನು ಅನುಷ್ಠಾನಕ್ಕೆ ತರುವ ಸಂಬಂಧ ರೂಪಿಸಲಾಗಿರುವ ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಮತ್ತು ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಕ್ಕೆ ತಿದ್ದುಪಡಿ ಮಸೂದೆಯನ್ನು ಮಂಡಿಸಿ ಈ ವಿಷಯ ತಿಳಿಸಿದರು.

ಕಳೆದ ಹಲವಾರು ವರ್ಷಗಳಿಂದ ಮಹಾನಗರ ಪಾಲಿಕೆಗಳು ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ಜಾಹೀರಾತುಗಳನ್ನು ಪ್ರದರ್ಶಿಸಲಾಗುತ್ತಿದೆ. ಆದರೆ, ಕೆಲವೇ ಕೆಲವು ಜಾಹೀರಾತು ಸಂಸ್ಥೆಗಳು ಶುಲ್ಕವನ್ನು ನೀಡುತ್ತಿದ್ದವೇ ಹೊರತು ಬಹುತೇಕ ಸಂಸ್ಥೆಗಳು ಬಿಡಿಗಾಸನ್ನೂ ನೀಡದೇ ಲಾಭ ಮಾಡಿಕೊಳ್ಳುತ್ತಿದ್ದವು. ಹೀಗಾಗಿ ಸ್ಥಳೀಯ ಸಂಸ್ಥೆಗಳಿಗೆ ನೂರಾರು ಕೋಟಿ ರೂಪಾಯಿ ಆದಾಯ ಬರದಂತಾಗಿತ್ತು. ಇದನ್ನು ತಪ್ಪಿಸಿ ಹೆಚ್ಚು ಹೆಚ್ಚು ಆದಾಯ ಬರುವಂತೆ ಮಾಡುವ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಸ್ಥಳಕ್ಕನುಗುಣವಾಗಿ ಶುಲ್ಕ ನಿಗದಿ
ಆಯಾ ಪ್ರದೇಶಗಳಿಗೆ ಅನುಗುಣವಾಗಿ, ಜಾಹೀರಾತಿನ ಗಾತ್ರಕ್ಕೆ ಮತ್ತು ಅವಧಿಗೆ ತಕ್ಕಂತೆ ಶುಲ್ಕವನ್ನು ನಿಗದಿಪಡಿಸಲಾಗುತ್ತದೆ. ಈ ಮಸೂದೆಗೆ ಅನುಮೋದನೆ ದೊರೆತ ನಂತದ ಆಯಾ ಪ್ರದೇಶಗಳ ಅನುಸಾರವಾಗಿ ಶುಲ್ಕ, ತೆರಿಗೆ ಮತ್ತು ಇನ್ನಿತರೆ ನೀತಿಗಳನ್ನು ರೂಪಿಸಲಾಗುತ್ತದೆ ಎಂದು ಸಚಿವರು ಸಭೆಯ ಗಮನಕ್ಕೆ ತಂದರು.

ಸಾರ್ವಜನಿಕರಿಗೆ ಅಡ್ಡಿಯಾದರೆ ಕ್ರಮ
ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಯಾಗುವ ರೀತಿಯಲ್ಲಿ ಹಾಕಿರುವ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗುತ್ತದೆ. ಫಲಕಗಳನ್ನು ಹಾಕಿದವರ ವಿರುದ್ಧ ಕ್ರಮವನ್ನೂ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಪ್ಲಾಸ್ಟಿಕ್ ನಿಷೇಧ
ಹಸಿರು ನ್ಯಾಯಮಂಡಳಿ ಪ್ಲಾಸ್ಟಿಕ್ ಅನ್ನು ನಿಷೇಧ ಮಾಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಫ್ಲೆಕ್ಸ್, ಬ್ಯಾನರ್ ಮತ್ತು ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ಅನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ. ಒಂದು ವೇಳೆ ನಿಯಮವನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ಬಳಸಿದರೆ, ಆ ಫ್ಲೆಕ್ಸ್, ಬ್ಯಾನರ್, ಫಲಕ ಹಾಕಿದವರು ಮತ್ತು ಮುದ್ರಣ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬೈರತಿ ಸುರೇಶ್ ಎಚ್ಚರಿಕೆ ನೀಡಿದರು.

ಅನಧಿಕೃತ ಜಾಹೀರಾತು ವಿರುದ್ಧ ಸಮರ
ನಗರ ಪ್ರದೇಶಗಳು ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಜಾಹೀರಾತು ಇದ್ದರೂ ಅದನ್ನು ತೆರವುಗೊಳಿಸಿ, ಅದರ ವಾರಸುದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ತಿಳಿಸಿದ ಅವರು, ಎಐ, ದ್ರೋಣ್ ಸೇರಿದಂತೆ ಲಭ್ಯವಿರುವ ತಂತ್ರಜ್ಞಾನಗಳನ್ನು ಬಳಸಿ ಎಲ್ಲೆಲ್ಲಿ ಅನಧಿಕೃತ ಜಾಹೀರಾತುಗಳಿವೆಯೇ ಎಂಬುದನ್ನು ಸಮೀಕ್ಷೆ ನಡೆಸಿ ಅವುಗಳನ್ನು ತೆರವುಗೊಳಿಸಲಾಗುತ್ತದೆ ಎಂದರು.

ಎಲ್ಇಡಿ ಜಾಹೀರಾತು ಫಲಕಗಳಿಗೆ ಪ್ರತ್ಯೇಕ ದರ
ಸದಸ್ಯರು ಎಲ್ಇಡಿ ಜಾಹೀರಾತು ಫಲಕಗಳ ಬಗ್ಗೆ ಗಮನಸೆಳೆದ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದ ಸಚಿವ ಬೈರತಿ ಸುರೇಶ್ ಅವರು, ಎಲ್ಇಡಿ ಫಲಕಗಳಿಗೆ ಪ್ರತ್ಯೇಕ ಶುಲ್ಕವನ್ನು ವಿಧಿಸಲಾಗುತ್ತದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

19 mins ago

ಓದುಗರ ಪತ್ರ: ಚಿನ್ನದ ಹೆಸರಿನಲ್ಲಾಗುವ ವಂಚನೆಯನ್ನು ತಡೆಗಟ್ಟಿ

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…

51 mins ago

ಓದುಗರ ಪತ್ರ: ವಿಜಯ್ ಉತ್ತಮ ಆಡಳಿತ ನೀಡಲಿ

ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…

53 mins ago

ಓದುಗರ ಪತ್ರ: ಖಾಸಗಿ ಅಂಗಡಿಗಳ ಮಾಲೀಕರಿಂದ ರಸ್ತೆ ಅತಿಕ್ರಮಣ

ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…

56 mins ago

ಓದುಗರ ಪತ್ರ: ಕೆರೆಗೆ ಘನತ್ಯಾಜ್ಯ ಸುರಿಯುವುದನ್ನು ತಡೆಗಟ್ಟಿ

ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ…

58 mins ago

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಪಿಎಗೆ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ಹಿಂಸಾಚಾರ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ…

1 hour ago