ರಾಜ್ಯ

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್

• ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ, ಅಂಗೀಕಾರ

• ಆಯಾ ಪ್ರದೇಶಗಳಿಗೆ ಅನುಗುಣವಾಗಿ ಜಾಹೀರಾತು ಶುಲ್ಕ ನಿಗದಿ

ವಿಧಾನಸಭೆ : ರಾಜ್ಯಾದ್ಯಂತ ಪ್ಲಾಸ್ಟಿಕ್ ಫ್ಲೆಕ್ಸ್, ಬಂಟಿಂಗ್ಸ್ ಮತ್ತು ಜಾಹೀರಾತು ಫಲಕಗಳನ್ನು ನಿಷೇಧಿಸಲಾಗಿದ್ದು, ಅನಧಿಕೃತ ಜಾಹೀರಾತುಗಳನ್ನು ಮುಲಾಜಿಲ್ಲದೇ ತೆರವುಗೊಳಿಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಸೋಮವಾರ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಮಹಾನಗರ ಪಾಲಿಕೆಗಳಲ್ಲಿ ಜಾಹೀರಾತು ಶುಲ್ಕ ನಿಗದಿಪಡಿಸಿ ಕಾನೂನನ್ನು ಅನುಷ್ಠಾನಕ್ಕೆ ತರುವ ಸಂಬಂಧ ರೂಪಿಸಲಾಗಿರುವ ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಮತ್ತು ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಕ್ಕೆ ತಿದ್ದುಪಡಿ ಮಸೂದೆಯನ್ನು ಮಂಡಿಸಿ ಈ ವಿಷಯ ತಿಳಿಸಿದರು.

ಕಳೆದ ಹಲವಾರು ವರ್ಷಗಳಿಂದ ಮಹಾನಗರ ಪಾಲಿಕೆಗಳು ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ಜಾಹೀರಾತುಗಳನ್ನು ಪ್ರದರ್ಶಿಸಲಾಗುತ್ತಿದೆ. ಆದರೆ, ಕೆಲವೇ ಕೆಲವು ಜಾಹೀರಾತು ಸಂಸ್ಥೆಗಳು ಶುಲ್ಕವನ್ನು ನೀಡುತ್ತಿದ್ದವೇ ಹೊರತು ಬಹುತೇಕ ಸಂಸ್ಥೆಗಳು ಬಿಡಿಗಾಸನ್ನೂ ನೀಡದೇ ಲಾಭ ಮಾಡಿಕೊಳ್ಳುತ್ತಿದ್ದವು. ಹೀಗಾಗಿ ಸ್ಥಳೀಯ ಸಂಸ್ಥೆಗಳಿಗೆ ನೂರಾರು ಕೋಟಿ ರೂಪಾಯಿ ಆದಾಯ ಬರದಂತಾಗಿತ್ತು. ಇದನ್ನು ತಪ್ಪಿಸಿ ಹೆಚ್ಚು ಹೆಚ್ಚು ಆದಾಯ ಬರುವಂತೆ ಮಾಡುವ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಸ್ಥಳಕ್ಕನುಗುಣವಾಗಿ ಶುಲ್ಕ ನಿಗದಿ
ಆಯಾ ಪ್ರದೇಶಗಳಿಗೆ ಅನುಗುಣವಾಗಿ, ಜಾಹೀರಾತಿನ ಗಾತ್ರಕ್ಕೆ ಮತ್ತು ಅವಧಿಗೆ ತಕ್ಕಂತೆ ಶುಲ್ಕವನ್ನು ನಿಗದಿಪಡಿಸಲಾಗುತ್ತದೆ. ಈ ಮಸೂದೆಗೆ ಅನುಮೋದನೆ ದೊರೆತ ನಂತದ ಆಯಾ ಪ್ರದೇಶಗಳ ಅನುಸಾರವಾಗಿ ಶುಲ್ಕ, ತೆರಿಗೆ ಮತ್ತು ಇನ್ನಿತರೆ ನೀತಿಗಳನ್ನು ರೂಪಿಸಲಾಗುತ್ತದೆ ಎಂದು ಸಚಿವರು ಸಭೆಯ ಗಮನಕ್ಕೆ ತಂದರು.

ಸಾರ್ವಜನಿಕರಿಗೆ ಅಡ್ಡಿಯಾದರೆ ಕ್ರಮ
ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಯಾಗುವ ರೀತಿಯಲ್ಲಿ ಹಾಕಿರುವ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗುತ್ತದೆ. ಫಲಕಗಳನ್ನು ಹಾಕಿದವರ ವಿರುದ್ಧ ಕ್ರಮವನ್ನೂ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಪ್ಲಾಸ್ಟಿಕ್ ನಿಷೇಧ
ಹಸಿರು ನ್ಯಾಯಮಂಡಳಿ ಪ್ಲಾಸ್ಟಿಕ್ ಅನ್ನು ನಿಷೇಧ ಮಾಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಫ್ಲೆಕ್ಸ್, ಬ್ಯಾನರ್ ಮತ್ತು ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ಅನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ. ಒಂದು ವೇಳೆ ನಿಯಮವನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ಬಳಸಿದರೆ, ಆ ಫ್ಲೆಕ್ಸ್, ಬ್ಯಾನರ್, ಫಲಕ ಹಾಕಿದವರು ಮತ್ತು ಮುದ್ರಣ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬೈರತಿ ಸುರೇಶ್ ಎಚ್ಚರಿಕೆ ನೀಡಿದರು.

ಅನಧಿಕೃತ ಜಾಹೀರಾತು ವಿರುದ್ಧ ಸಮರ
ನಗರ ಪ್ರದೇಶಗಳು ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಜಾಹೀರಾತು ಇದ್ದರೂ ಅದನ್ನು ತೆರವುಗೊಳಿಸಿ, ಅದರ ವಾರಸುದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ತಿಳಿಸಿದ ಅವರು, ಎಐ, ದ್ರೋಣ್ ಸೇರಿದಂತೆ ಲಭ್ಯವಿರುವ ತಂತ್ರಜ್ಞಾನಗಳನ್ನು ಬಳಸಿ ಎಲ್ಲೆಲ್ಲಿ ಅನಧಿಕೃತ ಜಾಹೀರಾತುಗಳಿವೆಯೇ ಎಂಬುದನ್ನು ಸಮೀಕ್ಷೆ ನಡೆಸಿ ಅವುಗಳನ್ನು ತೆರವುಗೊಳಿಸಲಾಗುತ್ತದೆ ಎಂದರು.

ಎಲ್ಇಡಿ ಜಾಹೀರಾತು ಫಲಕಗಳಿಗೆ ಪ್ರತ್ಯೇಕ ದರ
ಸದಸ್ಯರು ಎಲ್ಇಡಿ ಜಾಹೀರಾತು ಫಲಕಗಳ ಬಗ್ಗೆ ಗಮನಸೆಳೆದ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದ ಸಚಿವ ಬೈರತಿ ಸುರೇಶ್ ಅವರು, ಎಲ್ಇಡಿ ಫಲಕಗಳಿಗೆ ಪ್ರತ್ಯೇಕ ಶುಲ್ಕವನ್ನು ವಿಧಿಸಲಾಗುತ್ತದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

8 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

9 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

10 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

10 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

10 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

11 hours ago