ರಾಜ್ಯ

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಿ: ಸಿಎಂಗೆ ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ ಖರ್ಗೆ ಅವರು, ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಮತ್ತಿತರ ಕಡೆ ಆರ್‌ಎಸ್‌ಎಸ್‌ ನಡೆಸುವ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಇದನ್ನು ಓದಿ : ಆರ್‌ಎಸ್‌ಎಸ್‌ಗೆ 100 ವರ್ಷ ತುಂಬಿದ ಬೆನ್ನಲ್ಲೇ ಬಿಗ್‌ ಶಾಕ್:‌ ಏನದು ಗೊತ್ತಾ?

ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡಿದೆ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಪೊಲೀಸ್ ಮೂಲಕ ಅನುಮತಿ ಪಡೆಯದ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

2 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

2 hours ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

2 hours ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

2 hours ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

3 hours ago