ಬೆಂಗಳೂರು: ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಒತ್ತಾಯಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ ಖರ್ಗೆ ಅವರು, ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಮತ್ತಿತರ ಕಡೆ ಆರ್ಎಸ್ಎಸ್ ನಡೆಸುವ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಇದನ್ನು ಓದಿ : ಆರ್ಎಸ್ಎಸ್ಗೆ 100 ವರ್ಷ ತುಂಬಿದ ಬೆನ್ನಲ್ಲೇ ಬಿಗ್ ಶಾಕ್: ಏನದು ಗೊತ್ತಾ?
ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡಿದೆ ಎಂದು ಹೇಳಿದ್ದಾರೆ.
ಆರ್ಎಸ್ಎಸ್ ಪೊಲೀಸ್ ಮೂಲಕ ಅನುಮತಿ ಪಡೆಯದ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…