ರಾಜ್ಯ

ತಾಕತ್ತಿದ್ದರೆ ಆರ್‌ಎಸ್‌ಎಸ್‌ ನಿಷೇಧ ಮಾಡಿ: ಆರ್‌.ಅಶೋಕ್‌ ಬಹಿರಂಗ ಸವಾಲು

ಬೆಂಗಳೂರು: ಆರ್‌ಎಸ್‌ಎಸ್‌ಗೆ ಕಡಿವಾಣ ಹಾಕುವ ವ್ಯರ್ಥ ಪ್ರಯತ್ನ ಬಿಟ್ಟು, ತಾಕತ್ತಿದ್ದರೆ ಇದನ್ನು ನಿಷೇಧ ಮಾಡಿ ನೋಡೋಣ ಎಂದು ರಾಜ್ಯ ಸರ್ಕಾರಕ್ಕೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಬಹಿರಂಗ ಸವಾಲು ಹಾಕಿದ್ದಾರೆ.

ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛಡಿಯೇಟು ಕೊಟ್ಟಿದ್ದು, ಈ ರೀತಿ ಹಿಂಬಾಗಿಲಿನಿಂದ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಹಾಕಲು ಆಗುವುದಿಲ್ಲ. ಅಲ್ಲದೆ, ಈ ಹಿಟ್ಲರ್ ಆಟ ಜಾಸ್ತಿ ದಿನ ನಡೆಯುವುದಿಲ್ಲ ಸ್ವಾಮಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಆರ್‌ಎಸ್‌ಎಸ್‌ ಪಥಸಂಚನಲಕ್ಕೆ ಅವಕಾಶ ನೀಡದಿರುವ ಕಾಂಗ್ರೆಸ್ ಸರ್ಕಾರದ ನಿರಂಕುಶವಾದಿ ನಡೆಗೆ ಮಾನ್ಯ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಅವರೇ, ನಿಮ್ಮ ಪರಮೋಚ್ಛ ನಾಯಕ ರಾಹುಲ್ ಗಾಂಧಿ ಅವರು ಸದಾ ಜೇಬಿನಲ್ಲಿಟ್ಟುಕೊಂಡು ಓಡಾಡುವ ಸಂವಿಧಾನ ಪುಸ್ತಕದಲ್ಲಿ ನಾಗರೀಕರ ಮೂಲಭೂತ ಹಕ್ಕುಗಳಿಗೆ ಸ್ಥಾನ ಇಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:-ತಾಕತ್ತಿದ್ದರೆ ಆರ್‌ಎಸ್‌ಎಸ್‌ ನಿಷೇಧ ಮಾಡಿ: ಆರ್‌.ಅಶೋಕ್‌ ಬಹಿರಂಗ ಸವಾಲು

ಮತ್ತೊಂದು ಪೋಸ್ಟ್‌ನಲ್ಲಿ ಒಂದೇ ಒಂದು ರಸ್ತೆ ಗುಂಡಿ ಮುಚ್ಚಲು ದುಡ್ಡಿಲ್ಲ. ಪಾಲಿಕೆ ಶಾಲೆಗಳ ಶಿಕ್ಷಕರಿಗೆ 6 ತಿಂಗಳಿಂದ ವೇತನ ಕೊಟ್ಟಿಲ್ಲ. 8 ತಿಂಗಳಿಂದ ಸ್ಮಶಾನ ಸಿಬ್ಬಂದಿಗೆ ಸಂಬಳವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಬೆಂಗಳೂರಿನ ಜನ ಪಾಲಿಕೆಗೆ ಕಟ್ಟುತ್ತಿರುವ ಸಾವಿರಾರು ಕೋಟಿ ತೆರಿಗೆ ಹಣ ಎಲ್ಲಿ ಸ್ವಾಮಿ? ಜನರ ತೆರಿಗೆ ಹಣ ಯಾರ ಜೇಬು ಸೇರುತ್ತಿದೆ? ಇದರ ಮೇಲೆ ಈಗ ಎ-ಖಾತಾ ಪರಿವರ್ತನೆ ನೆಪದಲ್ಲಿ ಮತ್ತೊಮ್ಮೆ ಜನ ಸಾಮಾನ್ಯರಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಲು ಇಳಿದಿದ್ದೀರಿ. ಬ್ರ್ಯಾಂಡ್ ಬೆಂಗಳೂರು ಮಾಡ್ತೀನಿ ಎಂದು ಬೆಂಗಳೂರನ್ನು ಬರ್ಬಾದ್ ಮಾಡಿಬಿಟ್ಟರಲ್ಲ ಸ್ವಾಮಿ. ಜನ ನಿಮ್ಮನ್ನು ಖಂಡಿತ ಕ್ಷಮಿಸುವುದಿಲ್ಲ ಎಂದು ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

6 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

7 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

7 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

8 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

8 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

9 hours ago