ರಾಜ್ಯ

ತಾಕತ್ತಿದ್ದರೆ ಆರ್‌ಎಸ್‌ಎಸ್‌ ನಿಷೇಧ ಮಾಡಿ: ಆರ್‌.ಅಶೋಕ್‌ ಬಹಿರಂಗ ಸವಾಲು

ಬೆಂಗಳೂರು: ಆರ್‌ಎಸ್‌ಎಸ್‌ಗೆ ಕಡಿವಾಣ ಹಾಕುವ ವ್ಯರ್ಥ ಪ್ರಯತ್ನ ಬಿಟ್ಟು, ತಾಕತ್ತಿದ್ದರೆ ಇದನ್ನು ನಿಷೇಧ ಮಾಡಿ ನೋಡೋಣ ಎಂದು ರಾಜ್ಯ ಸರ್ಕಾರಕ್ಕೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಬಹಿರಂಗ ಸವಾಲು ಹಾಕಿದ್ದಾರೆ.

ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛಡಿಯೇಟು ಕೊಟ್ಟಿದ್ದು, ಈ ರೀತಿ ಹಿಂಬಾಗಿಲಿನಿಂದ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಹಾಕಲು ಆಗುವುದಿಲ್ಲ. ಅಲ್ಲದೆ, ಈ ಹಿಟ್ಲರ್ ಆಟ ಜಾಸ್ತಿ ದಿನ ನಡೆಯುವುದಿಲ್ಲ ಸ್ವಾಮಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಆರ್‌ಎಸ್‌ಎಸ್‌ ಪಥಸಂಚನಲಕ್ಕೆ ಅವಕಾಶ ನೀಡದಿರುವ ಕಾಂಗ್ರೆಸ್ ಸರ್ಕಾರದ ನಿರಂಕುಶವಾದಿ ನಡೆಗೆ ಮಾನ್ಯ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಅವರೇ, ನಿಮ್ಮ ಪರಮೋಚ್ಛ ನಾಯಕ ರಾಹುಲ್ ಗಾಂಧಿ ಅವರು ಸದಾ ಜೇಬಿನಲ್ಲಿಟ್ಟುಕೊಂಡು ಓಡಾಡುವ ಸಂವಿಧಾನ ಪುಸ್ತಕದಲ್ಲಿ ನಾಗರೀಕರ ಮೂಲಭೂತ ಹಕ್ಕುಗಳಿಗೆ ಸ್ಥಾನ ಇಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:-ತಾಕತ್ತಿದ್ದರೆ ಆರ್‌ಎಸ್‌ಎಸ್‌ ನಿಷೇಧ ಮಾಡಿ: ಆರ್‌.ಅಶೋಕ್‌ ಬಹಿರಂಗ ಸವಾಲು

ಮತ್ತೊಂದು ಪೋಸ್ಟ್‌ನಲ್ಲಿ ಒಂದೇ ಒಂದು ರಸ್ತೆ ಗುಂಡಿ ಮುಚ್ಚಲು ದುಡ್ಡಿಲ್ಲ. ಪಾಲಿಕೆ ಶಾಲೆಗಳ ಶಿಕ್ಷಕರಿಗೆ 6 ತಿಂಗಳಿಂದ ವೇತನ ಕೊಟ್ಟಿಲ್ಲ. 8 ತಿಂಗಳಿಂದ ಸ್ಮಶಾನ ಸಿಬ್ಬಂದಿಗೆ ಸಂಬಳವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಬೆಂಗಳೂರಿನ ಜನ ಪಾಲಿಕೆಗೆ ಕಟ್ಟುತ್ತಿರುವ ಸಾವಿರಾರು ಕೋಟಿ ತೆರಿಗೆ ಹಣ ಎಲ್ಲಿ ಸ್ವಾಮಿ? ಜನರ ತೆರಿಗೆ ಹಣ ಯಾರ ಜೇಬು ಸೇರುತ್ತಿದೆ? ಇದರ ಮೇಲೆ ಈಗ ಎ-ಖಾತಾ ಪರಿವರ್ತನೆ ನೆಪದಲ್ಲಿ ಮತ್ತೊಮ್ಮೆ ಜನ ಸಾಮಾನ್ಯರಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಲು ಇಳಿದಿದ್ದೀರಿ. ಬ್ರ್ಯಾಂಡ್ ಬೆಂಗಳೂರು ಮಾಡ್ತೀನಿ ಎಂದು ಬೆಂಗಳೂರನ್ನು ಬರ್ಬಾದ್ ಮಾಡಿಬಿಟ್ಟರಲ್ಲ ಸ್ವಾಮಿ. ಜನ ನಿಮ್ಮನ್ನು ಖಂಡಿತ ಕ್ಷಮಿಸುವುದಿಲ್ಲ ಎಂದು ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

4 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

4 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

4 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

5 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago