ರಾಜ್ಯ

ಪ್ರಶ್ನಿಸುವ ಗುಣಗಳುಳ್ಳ ಪ್ರಾಮಾಣಿಕ ಪತ್ರಕರ್ತ ಬಾನಾಸು: ನಟಿ ಉಮಾಶ್ರೀ

ಕಾಸರಗೋಡು : ಕಳೆದ ಐದು ದಶಕಗಳಿಂದ ಸಿನಿಮಾ ಕ್ಷೇತ್ರದ ಒಳ ಹೊರಗನ್ನು ಅತೀ ಹತ್ತಿರದಿಂದ ಬಲ್ಲ ಬಾನಾಸು ಅವರ ಅನುಭವಗಳನ್ನು ದಾಖಲಿಸಿ ಪುಸ್ತಕರೂಪವನ್ನು ಹೊರ ತರಬೇಕು. ಅದರಿಂದ ಮುಂದಿನ ತಲೆಮಾರಿನವರಿಗೆ ಕನ್ನಡ ಚಿತ್ರರಂಗದ ಮಾಹಿತಿಗಳನ್ನು ನೀಡಿದಂತಾಗುತ್ತದೆ ಎಂದು ಶಾಸಕಿ ಉಮಾಶ್ರೀ ತಿಳಿಸಿದರು.

ಅವರು ಕಾಸರಗೋಡಿನ *ಸಾಂಸ್ಕೃತಿಕ -ಸಾಹಿತ್ಯಕ ಸಂಸ್ಥೆ ರಂಗ ಚಿನ್ನಾರಿ ಮತ್ತು ಅದರ ಸಹ ಘಟಕಗಳಾದ ನಾರಿ ಚಿನ್ನಾರಿ,  ಸ್ವರ ಚಿನ್ನಾರಿ ಜೊತೆಗೆ ಕಾಸರಗೋಡಿನ ಕನ್ನಡ ಪರ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಿದ 2021 ನೇ ಸಾಲಿನ 69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ವಿಮರ್ಶಕ ಪ್ರಶಸ್ತಿಗೆ ಭಾಜನರಾದ ಸುಬ್ರಹ್ಮಣ್ಯ ಬಾಡೂರು (ಬಾನಾಸು) ಅವರಿಗೆ ಪದ್ಮಗಿರಿ ಕಲಾ ಕುಟೀರ ದಲ್ಲಿ ದಿನಾಂಕ 1.12.2023 ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಹುಟ್ಟೂರ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ ಒಬ್ಬ ಸೃಜನಶೀಲ, ಸೌಮ್ಯ ಸ್ವಭಾವದ ಪ್ರಶ್ನಿಸುವ ಗುಣಗಳುಳ್ಳ ಪ್ರಾಮಾಣಿಕ ಪತ್ರಕರ್ತ, ನನ್ನ ಗೆಳೆಯ ಅನ್ನುವುದೇ ನನಗೆ ಅಭಿಮಾನ ಎಂದರು.

ಹುಟ್ಟೂರ ಗೌರವ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಕಾಸರಗೋಡಿನ ಕನ್ನಡ ಪರ ಸಂಘಟನೆಗಳು ಕೈ ಜೋಡಿಸಿದರೆ ಕಾಸರಗೋಡಿನ ಕನ್ನಡಿಗರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬಹುದು ಎಂದರಲ್ಲದೆ ಸುಬ್ರಹ್ಮಣ್ಯ ಬಾಡೂರು ಅವರ ರಾಷ್ಟ್ರ ಮಟ್ಟದ ಸಾಧನೆ ಕಾಸರಗೋಡಿನ ಕನ್ನಡಿಗರಿಗೆಲ್ಲ ಕೀರ್ತಿ ತಂದಿದೆ ಎಂದರು.

ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ಮಾತನಾಡಿ ಬಾನಾಸು ಕಾಸರಗೋಡಿಗೆ ಅಭಿಮಾನ ತರುವ ಕೆಲಸ ಮಾಡಿದ್ದಾರೆ. ಅವರು ಮತ್ತಷ್ಟು ಪ್ರಶಸ್ತಿ ಗಳಿಸಲಿ ಎಂದು ಶುಭ ಹಾರೈಸಿದರು.ರಾಷ್ಟ್ರ ಪ್ರಶಸ್ತಿ ವಿಜೇತ,ನಟ,ಶಿವಧ್ವಜ ಶೆಟ್ಟಿ ಮಾತನಾಡಿ,ಬಾನಾಸು ಅವರು ನನ್ನ ಸಿನಿಮಾ ರಂಗದ ಪ್ರವೇಶದ ಸಂದರ್ಭಗಳಲ್ಲಿ ಗುರುಸ್ಥಾನದಲ್ಲಿದ್ದು, ಬೆನ್ನು ತಟ್ಟಿ ಆಶೀರ್ವದಿಸಿ ತಿದ್ದಿದವರು.ಅವರಿಗೆ ಸಿನಿಮಾ ಕ್ಷೇತ್ರದ ಬಗ್ಗೆ ಇರುವ ಮಾಹಿತಿ ನಿಜಕ್ಕೂ ಆಶ್ಚರ್ಯ ಎನಿಸುತ್ತದೆ .ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ನಿರಂತರವಾಗಿ ಭಾಗವಹಿಸುತ್ತಿರುವ ಅವರು ಕನ್ನಡ ಚಿತ್ರರಂಗದ ಎನ್ಸೈಕ್ಲೋಪೀಡಿಯಾ ಎಂದರು.

ಮೈಸೂರಿನ ಖ್ಯಾತ ಪತ್ರಕರ್ತ ರವೀಂದ್ರ ಜೋಶಿ ಅವರು. ಮಾತನಾಡಿ, ‘ಆಂದೋಲನ’ ಪತ್ರಿಕೆಯ ವರದಿಗೆ ರಾಷ್ಟ್ರ ಪ್ರಶಸ್ತಿ ಬಂದ ವಿವರವನ್ನು ತಿಳಿಸಿ, ಅವರಿಗೆ ಶುಭ ಹಾರೈಸಿದರು.

ಕಾಸರಗೋಡಿನ ಕನ್ನಡ ಪರ 25 ಸಂಸ್ಥೆಗಳು ಬಾನಾಸು ಅವರಿಗೆ ಶಾಲು,ಹಾರ ನೀಡಿ ಗೌರವಿಸಿದರು. ರಂಗ ಚಿನ್ನಾರಿ ಸಂಸ್ಥೆಯ ಪರವಾಗಿ ಪೇಟ,ಶಾಲು,ಫಲ, ಸನ್ಮಾನ ಪತ್ರ, ಸ್ಮರಣಿಕೆಗಳನ್ನು ನೀಡಿ ಸನ್ಮಾನಿಸಲಾಯಿತು.

ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಸುಬ್ರಹ್ಮಣ್ಯ ಬಾಡೂರು , ಚಿತ್ರರಂಗದಲ್ಲಿ ತಾನು ನಡೆದು ಬಂದ ದಾರಿಯನ್ನು ಹೇಳಿ, ‘ಹುಟ್ಟೂರ ಗೌರವ’ ನೀಡಿದ ಎಲ್ಲರಿಗೂ ಕೃತಜ್ಞತೆಗಳನ್ನು ಹೇಳಿದರು..ಕಾರ್ಯಕ್ರಮದ ಮುಂಚಿತವಾಗಿ ಅಂತರರಾಷ್ಟ್ರೀಯ ಗಾಯಕ ಶ್ರೀ ರವೀಂದ್ರ ಪ್ರಭು ಅವರಿಂದ ಭಕ್ತಿ ಭಾವಗೀತೆಗಳ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಆರ್ಗಾನ್ ನಲ್ಲಿ ಪುರುಷೋತ್ತಮ ಕೊಪ್ಪಳ ಹಾಗೂ ತಬಲಾದಲ್ಲಿ ರಾಜೇಶ್ ಭಾಗವತ್ ಸಾಥ್ ನೀಡಿದರು.

ರಂಗ ಚಿನ್ನಾರಿ ನಿರ್ದೇಶಕ, ಕಾರ್ಯಕ್ರಮ ಸಂಯೋಜಕ, ಕಾಸರಗೋಡು ಚಿನ್ನಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು, ಕಿಶೋರ್ ಪೆರ್ಲ ಅವರು ಪ್ರಾರ್ಥನೆ ಹಾಡಿದರು.

ನಾರಿ ಚಿನ್ನಾರಿಯ ಅಧ್ಯಕ್ಷೆ ಸವಿತಾ ಟೀಚರ್, ಕಾರ್ಯದರ್ಶಿ ದಿವ್ಯಾಗಟ್ಟಿ ಪರಕ್ಕಿಲ, ಕೋಶಾಧಿಕಾರಿ ವೀಣಾ ಅರುಣ್ ಶೆಟ್ಟಿ, ಸರ್ವಮಂಗಳ ‘ಸ್ವರ ಚಿನ್ನಾರಿ’ ಘಟಕದ ಗೌರವಾಧ್ಯಕ್ಷರಾದ ಶ್ರೀಕೃಷ್ಣಯ್ಯ ಅನಂತಪುರ, ರಂಗ ಚಿನ್ನಾರಿ ನಿರ್ದೇಶಕರಾದ ಕೋಳಾರು ಸತೀಶ್ಚಂದ್ರ ಭಂಡಾರಿ, ಅಧ್ಯಕ್ಷರಾದ ಪುರುಷೋತ್ತಮ ಕೊಪ್ಪಳ, ಜನಾರ್ದನ ಅಣಂಗೂರು, ಉದಯ ಮನ್ನಿಪ್ಪಾಡಿ, ಮನೋಹರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago