ರಾಜ್ಯ

ಪ್ರಶ್ನಿಸುವ ಗುಣಗಳುಳ್ಳ ಪ್ರಾಮಾಣಿಕ ಪತ್ರಕರ್ತ ಬಾನಾಸು: ನಟಿ ಉಮಾಶ್ರೀ

ಕಾಸರಗೋಡು : ಕಳೆದ ಐದು ದಶಕಗಳಿಂದ ಸಿನಿಮಾ ಕ್ಷೇತ್ರದ ಒಳ ಹೊರಗನ್ನು ಅತೀ ಹತ್ತಿರದಿಂದ ಬಲ್ಲ ಬಾನಾಸು ಅವರ ಅನುಭವಗಳನ್ನು ದಾಖಲಿಸಿ ಪುಸ್ತಕರೂಪವನ್ನು ಹೊರ ತರಬೇಕು. ಅದರಿಂದ ಮುಂದಿನ ತಲೆಮಾರಿನವರಿಗೆ ಕನ್ನಡ ಚಿತ್ರರಂಗದ ಮಾಹಿತಿಗಳನ್ನು ನೀಡಿದಂತಾಗುತ್ತದೆ ಎಂದು ಶಾಸಕಿ ಉಮಾಶ್ರೀ ತಿಳಿಸಿದರು.

ಅವರು ಕಾಸರಗೋಡಿನ *ಸಾಂಸ್ಕೃತಿಕ -ಸಾಹಿತ್ಯಕ ಸಂಸ್ಥೆ ರಂಗ ಚಿನ್ನಾರಿ ಮತ್ತು ಅದರ ಸಹ ಘಟಕಗಳಾದ ನಾರಿ ಚಿನ್ನಾರಿ,  ಸ್ವರ ಚಿನ್ನಾರಿ ಜೊತೆಗೆ ಕಾಸರಗೋಡಿನ ಕನ್ನಡ ಪರ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಿದ 2021 ನೇ ಸಾಲಿನ 69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ವಿಮರ್ಶಕ ಪ್ರಶಸ್ತಿಗೆ ಭಾಜನರಾದ ಸುಬ್ರಹ್ಮಣ್ಯ ಬಾಡೂರು (ಬಾನಾಸು) ಅವರಿಗೆ ಪದ್ಮಗಿರಿ ಕಲಾ ಕುಟೀರ ದಲ್ಲಿ ದಿನಾಂಕ 1.12.2023 ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಹುಟ್ಟೂರ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ ಒಬ್ಬ ಸೃಜನಶೀಲ, ಸೌಮ್ಯ ಸ್ವಭಾವದ ಪ್ರಶ್ನಿಸುವ ಗುಣಗಳುಳ್ಳ ಪ್ರಾಮಾಣಿಕ ಪತ್ರಕರ್ತ, ನನ್ನ ಗೆಳೆಯ ಅನ್ನುವುದೇ ನನಗೆ ಅಭಿಮಾನ ಎಂದರು.

ಹುಟ್ಟೂರ ಗೌರವ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಕಾಸರಗೋಡಿನ ಕನ್ನಡ ಪರ ಸಂಘಟನೆಗಳು ಕೈ ಜೋಡಿಸಿದರೆ ಕಾಸರಗೋಡಿನ ಕನ್ನಡಿಗರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬಹುದು ಎಂದರಲ್ಲದೆ ಸುಬ್ರಹ್ಮಣ್ಯ ಬಾಡೂರು ಅವರ ರಾಷ್ಟ್ರ ಮಟ್ಟದ ಸಾಧನೆ ಕಾಸರಗೋಡಿನ ಕನ್ನಡಿಗರಿಗೆಲ್ಲ ಕೀರ್ತಿ ತಂದಿದೆ ಎಂದರು.

ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ಮಾತನಾಡಿ ಬಾನಾಸು ಕಾಸರಗೋಡಿಗೆ ಅಭಿಮಾನ ತರುವ ಕೆಲಸ ಮಾಡಿದ್ದಾರೆ. ಅವರು ಮತ್ತಷ್ಟು ಪ್ರಶಸ್ತಿ ಗಳಿಸಲಿ ಎಂದು ಶುಭ ಹಾರೈಸಿದರು.ರಾಷ್ಟ್ರ ಪ್ರಶಸ್ತಿ ವಿಜೇತ,ನಟ,ಶಿವಧ್ವಜ ಶೆಟ್ಟಿ ಮಾತನಾಡಿ,ಬಾನಾಸು ಅವರು ನನ್ನ ಸಿನಿಮಾ ರಂಗದ ಪ್ರವೇಶದ ಸಂದರ್ಭಗಳಲ್ಲಿ ಗುರುಸ್ಥಾನದಲ್ಲಿದ್ದು, ಬೆನ್ನು ತಟ್ಟಿ ಆಶೀರ್ವದಿಸಿ ತಿದ್ದಿದವರು.ಅವರಿಗೆ ಸಿನಿಮಾ ಕ್ಷೇತ್ರದ ಬಗ್ಗೆ ಇರುವ ಮಾಹಿತಿ ನಿಜಕ್ಕೂ ಆಶ್ಚರ್ಯ ಎನಿಸುತ್ತದೆ .ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ನಿರಂತರವಾಗಿ ಭಾಗವಹಿಸುತ್ತಿರುವ ಅವರು ಕನ್ನಡ ಚಿತ್ರರಂಗದ ಎನ್ಸೈಕ್ಲೋಪೀಡಿಯಾ ಎಂದರು.

ಮೈಸೂರಿನ ಖ್ಯಾತ ಪತ್ರಕರ್ತ ರವೀಂದ್ರ ಜೋಶಿ ಅವರು. ಮಾತನಾಡಿ, ‘ಆಂದೋಲನ’ ಪತ್ರಿಕೆಯ ವರದಿಗೆ ರಾಷ್ಟ್ರ ಪ್ರಶಸ್ತಿ ಬಂದ ವಿವರವನ್ನು ತಿಳಿಸಿ, ಅವರಿಗೆ ಶುಭ ಹಾರೈಸಿದರು.

ಕಾಸರಗೋಡಿನ ಕನ್ನಡ ಪರ 25 ಸಂಸ್ಥೆಗಳು ಬಾನಾಸು ಅವರಿಗೆ ಶಾಲು,ಹಾರ ನೀಡಿ ಗೌರವಿಸಿದರು. ರಂಗ ಚಿನ್ನಾರಿ ಸಂಸ್ಥೆಯ ಪರವಾಗಿ ಪೇಟ,ಶಾಲು,ಫಲ, ಸನ್ಮಾನ ಪತ್ರ, ಸ್ಮರಣಿಕೆಗಳನ್ನು ನೀಡಿ ಸನ್ಮಾನಿಸಲಾಯಿತು.

ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಸುಬ್ರಹ್ಮಣ್ಯ ಬಾಡೂರು , ಚಿತ್ರರಂಗದಲ್ಲಿ ತಾನು ನಡೆದು ಬಂದ ದಾರಿಯನ್ನು ಹೇಳಿ, ‘ಹುಟ್ಟೂರ ಗೌರವ’ ನೀಡಿದ ಎಲ್ಲರಿಗೂ ಕೃತಜ್ಞತೆಗಳನ್ನು ಹೇಳಿದರು..ಕಾರ್ಯಕ್ರಮದ ಮುಂಚಿತವಾಗಿ ಅಂತರರಾಷ್ಟ್ರೀಯ ಗಾಯಕ ಶ್ರೀ ರವೀಂದ್ರ ಪ್ರಭು ಅವರಿಂದ ಭಕ್ತಿ ಭಾವಗೀತೆಗಳ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಆರ್ಗಾನ್ ನಲ್ಲಿ ಪುರುಷೋತ್ತಮ ಕೊಪ್ಪಳ ಹಾಗೂ ತಬಲಾದಲ್ಲಿ ರಾಜೇಶ್ ಭಾಗವತ್ ಸಾಥ್ ನೀಡಿದರು.

ರಂಗ ಚಿನ್ನಾರಿ ನಿರ್ದೇಶಕ, ಕಾರ್ಯಕ್ರಮ ಸಂಯೋಜಕ, ಕಾಸರಗೋಡು ಚಿನ್ನಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು, ಕಿಶೋರ್ ಪೆರ್ಲ ಅವರು ಪ್ರಾರ್ಥನೆ ಹಾಡಿದರು.

ನಾರಿ ಚಿನ್ನಾರಿಯ ಅಧ್ಯಕ್ಷೆ ಸವಿತಾ ಟೀಚರ್, ಕಾರ್ಯದರ್ಶಿ ದಿವ್ಯಾಗಟ್ಟಿ ಪರಕ್ಕಿಲ, ಕೋಶಾಧಿಕಾರಿ ವೀಣಾ ಅರುಣ್ ಶೆಟ್ಟಿ, ಸರ್ವಮಂಗಳ ‘ಸ್ವರ ಚಿನ್ನಾರಿ’ ಘಟಕದ ಗೌರವಾಧ್ಯಕ್ಷರಾದ ಶ್ರೀಕೃಷ್ಣಯ್ಯ ಅನಂತಪುರ, ರಂಗ ಚಿನ್ನಾರಿ ನಿರ್ದೇಶಕರಾದ ಕೋಳಾರು ಸತೀಶ್ಚಂದ್ರ ಭಂಡಾರಿ, ಅಧ್ಯಕ್ಷರಾದ ಪುರುಷೋತ್ತಮ ಕೊಪ್ಪಳ, ಜನಾರ್ದನ ಅಣಂಗೂರು, ಉದಯ ಮನ್ನಿಪ್ಪಾಡಿ, ಮನೋಹರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago