ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲ ತೀರದಲ್ಲಿ ಕೋಲಾರ ಮೂಲದ ನಾಲ್ವರು ವಿದ್ಯಾರ್ಥಿನಿಯರ ದುರಂತ ಸಾವಿನ ನಂತರ 21 ದಿನಗಳ ಕಾಲ ಪ್ರವಾಸಿಗರಿಗೆ ಕಡಲ ತೀರ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು. ಆದರೆ ಇದೀಗ ಆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾಡಳಿತದಿಂದ ಆದೇಶ ಹೊರಡಿಸಲಾಗಿದೆ.
ಈಜು ವಲಯಕ್ಕೆ ಪ್ರತ್ಯೇಕ ಸ್ಥಳ ನಿಗಧಿ
ಮುರುಡೇಶ್ವರ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಕಡಲ ತೀರದಿಂದ 250 ಮೀಟರ್ ಈಜಲು ಪ್ರತ್ಯೇಕ ಸ್ಥಳವನ್ನು ನಿಗಧಿ ಮಾಡಲಾಗಿದೆ. ಅಲ್ಲದೇ ಪ್ರವಾಸಿಗರ ಸುರಕ್ಷತೆಗಾಗಿ ಜೀವರಕ್ಷಕ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಹಿಂದೆ ಇದ್ದಂತಹ ಸಿಬ್ಬಂದಿಗಳನ್ನು 12 ಸಂಖ್ಯೆಗೆ ಏರಿಸಲಾಗಿದೆ. ಅದರ ಜೊತೆಗೆ ಸ್ಪೀಡ್ ಬೋಟ್, ಜೆಟ್ ಸ್ಕೈ, ಆಮ್ಲಜನಕ ಕಿಟ್, ಮತ್ತು ಲೈಫ್ ಜಾಕೆಟ್ ಸಾಧನಗಳನ್ನು ನೀಡಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಇನ್ನೂ ಕಡಲ ತೀರದ ಅಲ್ಲಲ್ಲಿ ಆಳ ಸಮುದ್ರಕ್ಕಿಳಿಯದಂತೆ ಸೂಚನಾ ಫಲಕಗಳನ್ನು ಅಳವಡಿಸಿ ಪ್ರವಾಸಿಗರಿಗೆ ಎಚ್ಚರಿಸುವ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಅಲ್ಲದೇ ಜೀವ ರಕ್ಷಕ ಸಿಬ್ಬಂದಿ ಜೊತೆಗೆ ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…