ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲ ತೀರದಲ್ಲಿ ಕೋಲಾರ ಮೂಲದ ನಾಲ್ವರು ವಿದ್ಯಾರ್ಥಿನಿಯರ ದುರಂತ ಸಾವಿನ ನಂತರ 21 ದಿನಗಳ ಕಾಲ ಪ್ರವಾಸಿಗರಿಗೆ ಕಡಲ ತೀರ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು. ಆದರೆ ಇದೀಗ ಆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾಡಳಿತದಿಂದ ಆದೇಶ ಹೊರಡಿಸಲಾಗಿದೆ.
ಈಜು ವಲಯಕ್ಕೆ ಪ್ರತ್ಯೇಕ ಸ್ಥಳ ನಿಗಧಿ
ಮುರುಡೇಶ್ವರ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಕಡಲ ತೀರದಿಂದ 250 ಮೀಟರ್ ಈಜಲು ಪ್ರತ್ಯೇಕ ಸ್ಥಳವನ್ನು ನಿಗಧಿ ಮಾಡಲಾಗಿದೆ. ಅಲ್ಲದೇ ಪ್ರವಾಸಿಗರ ಸುರಕ್ಷತೆಗಾಗಿ ಜೀವರಕ್ಷಕ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಹಿಂದೆ ಇದ್ದಂತಹ ಸಿಬ್ಬಂದಿಗಳನ್ನು 12 ಸಂಖ್ಯೆಗೆ ಏರಿಸಲಾಗಿದೆ. ಅದರ ಜೊತೆಗೆ ಸ್ಪೀಡ್ ಬೋಟ್, ಜೆಟ್ ಸ್ಕೈ, ಆಮ್ಲಜನಕ ಕಿಟ್, ಮತ್ತು ಲೈಫ್ ಜಾಕೆಟ್ ಸಾಧನಗಳನ್ನು ನೀಡಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಇನ್ನೂ ಕಡಲ ತೀರದ ಅಲ್ಲಲ್ಲಿ ಆಳ ಸಮುದ್ರಕ್ಕಿಳಿಯದಂತೆ ಸೂಚನಾ ಫಲಕಗಳನ್ನು ಅಳವಡಿಸಿ ಪ್ರವಾಸಿಗರಿಗೆ ಎಚ್ಚರಿಸುವ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಅಲ್ಲದೇ ಜೀವ ರಕ್ಷಕ ಸಿಬ್ಬಂದಿ ಜೊತೆಗೆ ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…