ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ.
ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ ರೈತರು ಹಾಗೂ ಜಾನುವಾರುಗಳು ಬಲಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಸಫಾರಿ ಸ್ಥಗಿತಗೊಳಿಸಲಾಗಿತ್ತು.
ಆದರೆ ಈಗ ಕಾಡು ಪ್ರಾಣಿಗಳ ಹಾವಳಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ಸಫಾರಿ ಆರಂಭಿಸಲಾಗಿದೆ.
ಪರ ವಿರೋಧದ ನಡುವೆ ಇಂದಿನಿಂದ ಷರತ್ತು ಬದ್ದ ನಿಬಂಧನೆಗಳೊಂದಿಗೆ ಸಫಾರಿ ಆರಂಭಿಸಲಾಗಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕೆಲ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ತಾಂತ್ರಿಕ ಸಮಿತಿ ಸಲ್ಲಿಸಿದ್ದ ವರದಿ ಆಧರಿಸಿ ಷರತ್ತು ಬದ್ಧ ನಿಬಂಧನೆಗಳನ್ನು ಪಾಲಿಸಲು ಸೂಚನೆ ನೀಡಲಾಗಿದ್ದು, ಸಫಾರಿ ಮಾರ್ಗಗಳ ಮರು ಪರಿಶೀಲನೆ, ವಾಹನಗಳ ಸಂಖ್ಯೆ ಮಿತಿಗೊಳಿಸುವುದು, ಸಮಯ ನಿಯಂತ್ರಣ ಸೇರಿದಂತೆ ಹಲವು ಷರತ್ತುಗಳನ್ನು ಹೇರಲಾಗಿದೆ.
ಸಫಾರಿಯಿಂದ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಎಂಬುದು ರೈತರ ವಾದವಾಗಿದ್ದು, ಸಫಾರಿ ಆರಂಭದಿಂದ ಸ್ಥಳೀಯರಿಗೆ ಸಂತಸ ಮನೆ ಮಾಡಿದೆ.
ಸಫಾರಿ ಆರಂಭದಿಂದ ಸ್ಥಳೀಯ ಯುವಕರಿಗೆ ಉದ್ಯೋಗ, ಹೋಟೆಲ್, ಲಾಡ್ಜ್, ಹೋಂಸ್ಟೇಗಳಲ್ಲಿ ಉತ್ತಮ ವ್ಯಾಪಾರ ವಹಿವಾಟು, ಸಣ್ಣ ಪುಟ್ಟ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲವನ್ನೂ ಪರಿಗಣಿಸಿ ಸಫಾರಿ ಪುನರಾರಂಭಕ್ಕೆ ಅನುಮತಿ ನೀಡಲಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…