ಸಚಿವರನ್ನು ಭೇಟಿಯಾದ ಎಎಐ ತಂಡ
ಬೆಂಗಳೂರು: ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು.
ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿ, ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಅತ್ಯಂತ ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ತಂಡಕ್ಕೆ ಸಲಹೆ ನೀಡಿದರು.
ಇಂದು ಸಹ ಈ ತಂಡ ನೆಲಮಂಗಲ- ಕುಣಿಗಲ್ ರಸ್ತೆಯ ಸ್ಥಳ ಪರಿಶೀಲನೆ ನಡೆಸಲಿದೆ.
ಉದ್ದೇಶಿತ ಎರಡನೆಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಮಿಸಲು ಸರಕಾರ ತೀರ್ಮಾನಿಸಿದೆ. ಸ್ಥಳ ಪರಿಶೀಲನೆಯ ಬಳಿಕ ಪ್ರಾಧಿಕಾರದ ಅಭಿಪ್ರಾಯ ಏನೆಂಬುದನ್ನು ತಿಳಿದುಕೊಂಡು, ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಪ್ರಾಧಿಕಾರದ ತಂಡದಲ್ಲಿ ಜನರಲ್ ಮ್ಯಾನೇಜರ್ ವಿಕ್ರಮ್ ಸಿಂಗ್, ಜಂಟಿ ಜನರಲ್ ಮ್ಯಾನೇಜರ್ ಕೆ. ಶ್ರೀನಿವಾಸರಾವ್, ಸಹಾಯಕ ಜನರಲ್ ಮ್ಯಾನೇಜರ್ ಮನುಜ್ ಭಾರದ್ವಾಜ್, ಪ್ರಧಾನ ಕಚೇರಿಯ ಅಧಿಕಾರಿಗಳಾದ ಸಚ್ಚಿದಾನಂದ್, ಸಂತೋಷಕುಮಾರ್ ಭಾರತಿ, ಅಮನ್ ಚಿಪಾ ಇದ್ದರು.
ಸರಕಾರದ ಪರವಾಗಿ ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಹೆಚ್ಚುವರಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಖುಷ್ಬೂ ಗೋಯಲ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಹಾಜರಿದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…