ಸಚಿವರನ್ನು ಭೇಟಿಯಾದ ಎಎಐ ತಂಡ
ಬೆಂಗಳೂರು: ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು.
ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿ, ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಅತ್ಯಂತ ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ತಂಡಕ್ಕೆ ಸಲಹೆ ನೀಡಿದರು.
ಇಂದು ಸಹ ಈ ತಂಡ ನೆಲಮಂಗಲ- ಕುಣಿಗಲ್ ರಸ್ತೆಯ ಸ್ಥಳ ಪರಿಶೀಲನೆ ನಡೆಸಲಿದೆ.
ಉದ್ದೇಶಿತ ಎರಡನೆಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಮಿಸಲು ಸರಕಾರ ತೀರ್ಮಾನಿಸಿದೆ. ಸ್ಥಳ ಪರಿಶೀಲನೆಯ ಬಳಿಕ ಪ್ರಾಧಿಕಾರದ ಅಭಿಪ್ರಾಯ ಏನೆಂಬುದನ್ನು ತಿಳಿದುಕೊಂಡು, ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಪ್ರಾಧಿಕಾರದ ತಂಡದಲ್ಲಿ ಜನರಲ್ ಮ್ಯಾನೇಜರ್ ವಿಕ್ರಮ್ ಸಿಂಗ್, ಜಂಟಿ ಜನರಲ್ ಮ್ಯಾನೇಜರ್ ಕೆ. ಶ್ರೀನಿವಾಸರಾವ್, ಸಹಾಯಕ ಜನರಲ್ ಮ್ಯಾನೇಜರ್ ಮನುಜ್ ಭಾರದ್ವಾಜ್, ಪ್ರಧಾನ ಕಚೇರಿಯ ಅಧಿಕಾರಿಗಳಾದ ಸಚ್ಚಿದಾನಂದ್, ಸಂತೋಷಕುಮಾರ್ ಭಾರತಿ, ಅಮನ್ ಚಿಪಾ ಇದ್ದರು.
ಸರಕಾರದ ಪರವಾಗಿ ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಹೆಚ್ಚುವರಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಖುಷ್ಬೂ ಗೋಯಲ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಹಾಜರಿದ್ದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…