ರಾಜ್ಯ

ಬೆಂಗಳೂರು | 4 ವರ್ಷದ ಬಾಲಕಿ ಬರ್ಬರ ಹತ್ಯೆ ; ಅತ್ಯಾಚಾರ ಶಂಕೆ

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ. ಬಾಲಕಿಯ ಶವ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳುಗುಟ್ಟದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿದೆ.

ಬಾಲಕಿ ಗುರುವಾರ ಸಂಜೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದಳು. ಪೋಷಕರು ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಪೊಲೀಸರಿಗೆ ದೂರು ನೀಡಿದ್ದರು.

ಬಳಿಕ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ, ರಾತ್ರಿ ವೇಳೆಗೆ ಬೋಳುಗುಟ್ಟದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಶವ ಪತ್ತೆ ಮಾಡಿದ್ದರು. ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳು ಬಾಲಕಿಯ ಗುರುತು ಮರೆಮಾಚಲು ಮುಖವನ್ನು ಕಲ್ಲಿನಿಂದ ಜಜ್ಜಿ ವಿಕೃತವಾಗಿ ಕೊಲೆ ಮಾಡಿದ್ದಾರೆ.

ದೇಹದ ಸ್ಥಿತಿಯನ್ನು ಗಮನಿಸಿದರೆ ಲೈಂಗಿಕ ದೌರ್ಜನ್ಯವೂ ನಡೆದಿರಬಹುದೆಂಬ ಅನುಮಾನವಿದೆ. ಈ ಬಗ್ಗೆ ಮರಣೋತ್ತರ ಪರೀಕ್ಷಾ ವರದಿಯಿಂದ ಸ್ಪಷ್ಟ ಮಾಹಿತಿಗಳು ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಕುಟುಂಬ ಮೂಲತಃ ಅಸ್ಸಾಂ ಮೂಲದವರಾಗಿದ್ದು, ತಂದೆ ಅಪಾರ್ಟ್‌ಮೆಂಟ್‌ನಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದು, ಜೊತೆಗೆ ಕಸದ ಸಂಗ್ರಹಣೆಯ ಕೆಲಸವೂ ಮಾಡುತ್ತಿದ್ದರು. ಕುಟುಂಬ ತಾತ್ಕಾಲಿಕ ಶೆಡ್‌ನಲ್ಲಿ ವಾಸಿಸುತ್ತಿತ್ತು ಎಂದು ತಿಳಿದುಬಂದಿದೆ.

ಆರೋಪಿಗಳು ಬಾಲಕಿಗೆ ಪರಿಚಿತರಾಗಿರುವ ಸಾಧ್ಯತೆ ಇದೆ. ಆಮಿಷ ನೀಡಿ ಆಕೆಯನ್ನು ಕರೆದೊಯ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವೈಷಮ್ಯದ ಆಯಾಮದಲ್ಲೂ ತನಿಖೆ ನಡೆಯುತ್ತಿದೆ. ಈ ಸಂಬಂಧ ಅಪಹರಣ, ಕೊಲೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago