ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಬಾಂಬ್ ಬೆದರಿಕೆ ಸಂದೇಶಗಳು ಹೆಚ್ಚುತ್ತಿದ್ದು, ಶಾಲಾ-ಕಾಲೇಜು, ವಿಮಾನ ನಿಲ್ದಾಣ ಹಾಗೂ ಪ್ರಮುಖ ಹೋಟೆಲ್ಗಳಿಗೆ ಬೆದರಿಕೆ ಸಂದೇಶಗಳು ಬರುತ್ತಿದೆ. ಅದರಂತೆ ನಗರದ ಪ್ರಮುಖ ಹೋಟೆಲ್ ಆಗಿರುವ ತಾಜ್ ವೆಸ್ಟ್ ಎಂಡ್ಗೆ ಇಂದು ಅಪರಿಚಿತ ದುಷ್ಕರ್ಮಿಯಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ರವಾನೆಯಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ. ಇಂದು ಬೆಳಿಗ್ಗೆ ಹೋಟೆಲ್ನ ಸಿಬ್ಬಂದಿಯು ಬಾಂಬ್ ಬೆದರಿಕೆ ಸಂದೇಶವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ನಿಷ್ಕ್ರಿಯ ದಳದವರು ಸ್ಥಳಕ್ಕೆ ಆಗಮಿಸಿ ಬಾಂಬ್ ತಪಾಸಣೆಯನ್ನು ಮಾಡಿದ್ದಾರೆ.
ಈ ಕುರಿತು ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್ ಮಾತನಾಡಿ, ಹೋಟೆಲ್ ಸಿಬ್ಬಂದಿಯ ಮಾಹಿತಿಯ ಮೇರೆಗೆ ಸ್ಥಳೀಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…