ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಬಾಂಬ್ ಬೆದರಿಕೆ ಸಂದೇಶಗಳು ಹೆಚ್ಚುತ್ತಿದ್ದು, ಶಾಲಾ-ಕಾಲೇಜು, ವಿಮಾನ ನಿಲ್ದಾಣ ಹಾಗೂ ಪ್ರಮುಖ ಹೋಟೆಲ್ಗಳಿಗೆ ಬೆದರಿಕೆ ಸಂದೇಶಗಳು ಬರುತ್ತಿದೆ. ಅದರಂತೆ ನಗರದ ಪ್ರಮುಖ ಹೋಟೆಲ್ ಆಗಿರುವ ತಾಜ್ ವೆಸ್ಟ್ ಎಂಡ್ಗೆ ಇಂದು ಅಪರಿಚಿತ ದುಷ್ಕರ್ಮಿಯಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ರವಾನೆಯಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ. ಇಂದು ಬೆಳಿಗ್ಗೆ ಹೋಟೆಲ್ನ ಸಿಬ್ಬಂದಿಯು ಬಾಂಬ್ ಬೆದರಿಕೆ ಸಂದೇಶವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ನಿಷ್ಕ್ರಿಯ ದಳದವರು ಸ್ಥಳಕ್ಕೆ ಆಗಮಿಸಿ ಬಾಂಬ್ ತಪಾಸಣೆಯನ್ನು ಮಾಡಿದ್ದಾರೆ.
ಈ ಕುರಿತು ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್ ಮಾತನಾಡಿ, ಹೋಟೆಲ್ ಸಿಬ್ಬಂದಿಯ ಮಾಹಿತಿಯ ಮೇರೆಗೆ ಸ್ಥಳೀಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…