ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ಸಂಭವಿಸಿದ್ದ ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ವೇಳೆ ಪ್ರತಿಕ್ರಿಯಿಸಿದ ಅವರು, ಇದು ಮಳೆಯಿಂದ ಸಂಭವಿಸಿದ ಘಟನೆ ಅಲ್ಲ. ಕಳಪೆ ಕಾಮಗಾರಿಯಿಂದ ಕಟ್ಟಡ ಕುಸಿದು ಈ ಅನಾಹುತ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು, 8 ಜನರನ್ನು ರಕ್ಷಣೆ ಮಾಡಲಾಗಿದೆ.
ಗಾಯಾಳುಗಳಿಗೆಲ್ಲಾ ಸರ್ಕಾರದಿಂದಲೇ ವೈದ್ಯಕೀಯ ವೆಚ್ಚ ಭರಿಸುತ್ತೇವೆ. ಗಾಯಾಳುಗಳು ಸಂಪೂರ್ಣ ಚೇತರಿಸಿಕೊಂಡ ಬಳಿಕ ಅವರಿಗೂ ಕೂಡ ಸರ್ಕಾರದಿಂದ ಪರಿಹಾರ ವಿತರಣೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…