ರಾಜ್ಯ

ಬೆಂಗಳೂರು: ಸಿಸಿಬಿ ದಾಳಿ ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದ ಮೂವರು ಬಂಧನ

ಬೆಂಗಳೂರು: ಕುಮಾರಸ್ವಾಮಿ ಲೇಔಟ್‌ನ ಚಂದ್ರಾನಗರದ ಮನೆಯೊಂದರ ಮೇಲೆ ಸಿಸಿಬಿ ದಾಳಿ ನಡೆಸಿ ಸುಮಾರು 71 ಲಕ್ಷ ರೂ. ಡ್ರಗ್ಸ್‌ ವಶಕ್ಕೆ ಪಡೆದಿದ್ದು, ನಾಲ್ವರರನ್ನು ಬಂಧಿಸಿದ್ದಾರೆ.

ಬೆಂಗಳೂರು ನಗರ ಪೊಲೀಸರು ಹಾಗೂ ಸಿಸಿಬಿ ಪೊಲೀಸರು 2025ರ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಡ್ರಗ್‌ ಪೆಡ್ಲರ್‌ಗಳು ಹಾಗೂ ವ್ಯಸನಿಗಳ ಮೇಲೆ ಕಣ್ಣಿಟ್ಟಿದ್ದು, ನಗರದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿಕೊಂಡಿದ್ದರು. ಅಂತೆಯೇ ದಾಳಿ ನಡೆಸಿದ ಅಧಿಕಾರಿಗಳಿಗೆ ಆರೋಪಿಗಳು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು, ಬಂಧಿತ ಆರೋಪಿಗಳನ್ನು ಅಜಿತ್‌, ಕಾರ್ತಿಕ್‌ ಹಾಗೂ ರಾಕೇಶ್‌ ಎಂದು ಗುರುತಿಸಲಾಗಿದೆ. ಈ ಆರೋಪಿಗಳಲ್ಲಿ ಕೇರಳ ಮೂಲದ ಒಬ್ಬ ವ್ಯಕ್ತಿ ಹಾಗೂ ಇಬ್ಬರು ಡ್ರಗ್‌ ಪೆಡ್ಲರ್‌ಗಳಾಗಿದ್ದಾರೆ.

ಈ ಕುರಿತು ಸಿಸಿಬಿ ಅಧಿಕಾರಿಗಳು ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸುವ ವೇಳೆ ಕೇರಳ ಮೂಲದಿಂದ ಡ್ರಗ್ಸ್‌ ಅನ್ನು ತೆಗೆದುಕೊಂಡು ಬಂದು ಚಂದ್ರಾನಗರದ ಮನೆಯೊಂದರರಲ್ಲಿ ಮಾದಕ ವಸ್ತುಗಳನ್ನು ಕಡಿಮೆಗೆ ಮಾರಾಟ ಮಾಡುತ್ತಿದ್ದೇವು ಎಂಬ ಅಂಶವನ್ನು ತಿಳಿಸಿದ್ದಾರೆ. ಅಂತೆಯೇ ಆ ಮನೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 15.05 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, 520 ಗ್ರಾಂ ಹೈಡ್ರೋ ಗಾಂಜಾ, ಸುಮಾರು 2 ಕೆ.ಜಿ. 223 ಗ್ರಾಂ ಗಾಂಜಾ ಹಾಗೂ ತೂಕದ ಯಂತ್ರ ಸೇರಿದಂತೆ ಮೊಬೈಲ್‌ ಅನ್ನು ವಶಕ್ಕೆ ಪಡೆದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

5 hours ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

6 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

6 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

7 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

8 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

9 hours ago