ಬೆಂಗಳೂರು: ಕುಮಾರಸ್ವಾಮಿ ಲೇಔಟ್ನ ಚಂದ್ರಾನಗರದ ಮನೆಯೊಂದರ ಮೇಲೆ ಸಿಸಿಬಿ ದಾಳಿ ನಡೆಸಿ ಸುಮಾರು 71 ಲಕ್ಷ ರೂ. ಡ್ರಗ್ಸ್ ವಶಕ್ಕೆ ಪಡೆದಿದ್ದು, ನಾಲ್ವರರನ್ನು ಬಂಧಿಸಿದ್ದಾರೆ.
ಬೆಂಗಳೂರು ನಗರ ಪೊಲೀಸರು ಹಾಗೂ ಸಿಸಿಬಿ ಪೊಲೀಸರು 2025ರ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಡ್ರಗ್ ಪೆಡ್ಲರ್ಗಳು ಹಾಗೂ ವ್ಯಸನಿಗಳ ಮೇಲೆ ಕಣ್ಣಿಟ್ಟಿದ್ದು, ನಗರದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿಕೊಂಡಿದ್ದರು. ಅಂತೆಯೇ ದಾಳಿ ನಡೆಸಿದ ಅಧಿಕಾರಿಗಳಿಗೆ ಆರೋಪಿಗಳು ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಬಂಧಿತ ಆರೋಪಿಗಳನ್ನು ಅಜಿತ್, ಕಾರ್ತಿಕ್ ಹಾಗೂ ರಾಕೇಶ್ ಎಂದು ಗುರುತಿಸಲಾಗಿದೆ. ಈ ಆರೋಪಿಗಳಲ್ಲಿ ಕೇರಳ ಮೂಲದ ಒಬ್ಬ ವ್ಯಕ್ತಿ ಹಾಗೂ ಇಬ್ಬರು ಡ್ರಗ್ ಪೆಡ್ಲರ್ಗಳಾಗಿದ್ದಾರೆ.
ಈ ಕುರಿತು ಸಿಸಿಬಿ ಅಧಿಕಾರಿಗಳು ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸುವ ವೇಳೆ ಕೇರಳ ಮೂಲದಿಂದ ಡ್ರಗ್ಸ್ ಅನ್ನು ತೆಗೆದುಕೊಂಡು ಬಂದು ಚಂದ್ರಾನಗರದ ಮನೆಯೊಂದರರಲ್ಲಿ ಮಾದಕ ವಸ್ತುಗಳನ್ನು ಕಡಿಮೆಗೆ ಮಾರಾಟ ಮಾಡುತ್ತಿದ್ದೇವು ಎಂಬ ಅಂಶವನ್ನು ತಿಳಿಸಿದ್ದಾರೆ. ಅಂತೆಯೇ ಆ ಮನೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 15.05 ಗ್ರಾಂ ಎಂಡಿಎಂಎ ಕ್ರಿಸ್ಟಲ್, 520 ಗ್ರಾಂ ಹೈಡ್ರೋ ಗಾಂಜಾ, ಸುಮಾರು 2 ಕೆ.ಜಿ. 223 ಗ್ರಾಂ ಗಾಂಜಾ ಹಾಗೂ ತೂಕದ ಯಂತ್ರ ಸೇರಿದಂತೆ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…