ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿಯಿಂದ ಲೋಕಾರ್ಪಣೆ?
ಬೆಂಗಳೂರು: ೨೦೨೩ರ ಜನವರಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಕಾರಿಡಾರ್ ಬಹುತೇಕ ತೆರೆಯಲಿದೆ. ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮಾರ್ಚ್ ೨೦೧೪ರಲ್ಲಿ, ಕೇಂದ್ರ ಹೆದ್ದಾರಿ ಸಾರಿಗೆ ಸಚಿವಾಲಯವು ದೇಶಾದ್ಯಂತ ಕೆಲವು ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗೆ ನವೀಕರಿಸಲಾಗುವುದು ಎಂದು ಘೋಷಿಸಿತು. ಅದರಲ್ಲಿ ಬೆಂಗಳೂರು-ಮೈಸೂರು ರಸ್ತೆಯು ಒಂದು. ರಾಷ್ಟ್ರೀಯ ಹೆದ್ದಾರಿ-೨೭೫ ಅನ್ನು ಆರು ಲೇನ್ ಎಕ್ಸ್ಪ್ರೆಸ್ವೇ ಸೇರಿದಂತೆ ೧೦ ಲೇನ್ಗಳಾಗಿ ಪರಿವರ್ತಿಸುತ್ತಿದೆ. ೧೧೭-ಕಿಮೀ ಹೆದ್ದಾರಿ ಬೆಂಗಳೂರಿನ ನೈಸ್ ರಸ್ತೆ ಪ್ರವೇಶದ್ವಾರದಿಂದ ಮೈಸೂರಿನ ರಿಂಗ್ ರೋಡ್ ಜಂಕ್ಷನ್ವರೆಗೆ ಪ್ರಯಾಣದ ಸಮಯವನ್ನು ಸರಾಸರಿ ಮೂರು ಗಂಟೆಗಳಿಂದ ಕೇವಲ ೯೦ ನಿಮಿಷಗಳಿಗೆ ಕಡಿತಗೊಳಿಸುವ ನಿರೀಕ್ಷೆಯಿದೆ.
ರಾಜ್ಯದ ರಾಜಧಾನಿ ಮತ್ತು ಮೈಸೂರು ನಡುವಿನ ಅಂತರವು ಸುಮಾರು ೧೪೦ ಕಿ.ಮೀ. ಸಂಪೂರ್ಣ ವ್ಯಾಪ್ತಿ ಎರಡು ಟೋಲ್ ಗೇಟ್ಗಳನ್ನು ಹೊಂದುವ ನಿರೀಕ್ಷೆಯಿದೆ ಮತ್ತು ಪ್ರತಿ ಟೋಲ್ಗೆ ೨೦೦ ರಿಂದ ೨೫೦ ರೂ. ಈ ವರ್ಷದ ಆರಂಭದಲ್ಲಿ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ೧೦-ಲೇನ್ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಕಾರಿಡಾರ್ ಕುರಿತು ಟ್ವೀಟ್ ವಾಡಿದ್ದರು.
ಯೋಜನೆುಂ ಪ್ರಕಾರ, ಕಾರಿಡಾರ್ ಒಂಬತ್ತು ಪ್ರಮುಖ ಸೇತುವೆಗಳು, ೪೪ ಸಣ್ಣ ಸೇತುವೆಗಳು ಮತ್ತು ನಾಲ್ಕು ರೈಲು ಮೇಲ್ಸೇತುವೆಗಳನ್ನು ಹೊಂದಿರುತ್ತದೆ. ಕೆಲವೆಡೆ ಸೇತುವೆ ಹಾಗೂ ಅಂಡರ್ಪಾಸ್ ನಿರ್ವಾಣಕ್ಕೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಪ್ರಸ್ತುತ, ಮಂಡ್ಯ ಜಿಲ್ಲೆಯ ಮದ್ದೂರಿನವರೆಗೆ ಮುಖ್ಯ ರಸ್ತೆ ತೆರೆದಿದೆ. ಇದನ್ನು ಬೆಂಗಳೂರಿನ ಕುಂಬಳಗೋಡಿನಿಂದ ೪೦ ನಿಮಿಷಗಳಲ್ಲಿ ತಲುಪಬಹುದು.
ಇನ್ನು ನಾಲ್ಕೈದು ದಿನಗಳಲ್ಲಿ ಮದ್ದೂರು ಬಳಿ ಬೈಪಾಸ್ ತೆರೆಯಲಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ ಮಂಡ್ಯ ಬಳಿಯ ಬೈಪಾಸ್ ಬಳಕೆದಾರರಿಗೆ ಮುಕ್ತವಾಗಲಿದೆ. ಜನವರಿ ವೇಳೆಗೆ ಮೈಸೂರಿನವರೆಗೆ ಉಳಿದ ಮಾರ್ಗವನ್ನು ತೆರೆಯಲಾಗುವುದು ಎಂದು ಅವರು ಹೇಳಿದರು. ಇದರ ಹೊರತಾಗಿ, ಫುಡ್ ಕೋರ್ಟ್ಗಳು ಮತ್ತು ವಿಶ್ರಾಂತಿ ಕೊಠಡಿಗಳ ನಿರ್ಮಾಣಕ್ಕೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.